ಎಚ್.ಡಿ.ಕೋಟೆ, ಫೆ.27:- ತಾಲೂಕಿನ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಪ್ರದೇಶದ ಸಫಾರಿಯಲ್ಲಿ ಸಂಜೆ ವೇಳೆ ಹೆಣ್ಣು ಹುಲಿ ಕಾಣಿಸಿಕೊಂಡು ಸಫಾರಿಗರಲ್ಲಿ ಉತ್ಸಾಹ ಮೂಡಿಸಿದ ಘಟನೆ ನಡೆದಿದೆ. ನಾಗರಹೊಳೆ ಅರಣ್ಯ...
ಮೈಸೂರು, ಫೆ.27: ನಂಜನಗೂಡು ತಾಲೂಕು ಇಮ್ಮಾವು ಗ್ರಾಮದ ಸರ್ವೆ ನಂ. 390ರಿಂದ 430ರವರೆಗೆ ಇರುವ ಜಮೀನಿನ ಗೇಣಿದಾರ ರೈತರಿಗೆ ಪರಿಹಾರ ಪಾವತಿಸುವಂತೆ ಹಾಗೂ ಕಾನೂನುಬಾಹಿರವಾಗಿ ಪರಿಹಾರ ಪಡೆದವರ...
ಕೆ.ಆರ್.ನಗರ:- ಭೂಮಿ ಮನುಷ್ಯನ ಏಕೈಕ ಆವಾಸ ತಾಣ. ಪರಿಸರ ನಾಶ ಮಾಡುತ್ತಾ ಹೋದರೆ ಭೂಮಿಯ ಜೊತೆಗೆ ಮಾನವ ಸಂತತಿಯೂ ವಿನಾಶ ಆಗುವುದು ಖಚಿತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಪರಿಸರ ಚಿಂತಕ ಡಾ. ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು. ಮೈಸೂರು ಜಿಲ್ಲೆ ತಿಪ್ಪುರು ಗ್ರಾಮದ ಸರಕಾರಿ ಪ್ರೌಢ ಶಾಲೆಯ ಪರಿಸರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ಸಂರಕ್ಷಣೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರತಿ ಕ್ಷಣವೂ ಪರಿಸರ ನಾಶ ಮಾಡುತ್ತಿದ್ದಾನೆ. ಕಾಡಿನಲ್ಲಿ ಆಹಾರ, ನೀರು ದೊರೆಯದೆ ಆನೆ, ಚಿರತೆ, ಹುಲಿ ಮೊದಲಾದ ಕಾಡು ಪ್ರಾಣಿಗಳು ಆಹಾರಅರಸಿ ಗ್ರಾಮಗಳಿಗೆ ನುಗ್ಗುತ್ತಿವೆ. ಹಲವು ಕಡೆ ಕಾಡು ಪ್ರಾಣಿಗಳ ಆಕ್ರೋಶಕ್ಕೆ ಮನುಷ್ಯರ ದುರಂತ ಸಾವುಗಳು ಆಗುತ್ತಿವೆ. ಪರಿಸರ ವಿನಾಶದ ಕಾರಣದಿಂದಗಿ ಮನುಷ್ಯರಲ್ಲಿ ರೋಗ ನಿರೋದಕ ಶಕ್ತಿ ಕಡಿಮೆ ಆಗುತ್ತಿದೆ....
ಮೈಸೂರು, ಫೆ.22: ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ 2026–31ನೇ ಅವಧಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರಿಗೆ ಮೈಸೂರು ವಕೀಲರ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ನಗರದ ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್ ಹಾಗೂ ಕಾರ್ಯದರ್ಶಿ ಎ.ಜಿ. ಸುಧೀರ್ ಅವರು ನೂತನ ನಿರ್ದೇಶಕರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎಸ್. ಲೋಕೇಶ್, ವಕೀಲರ ಕಲ್ಯಾಣ ಹಾಗೂ ಗೃಹ ನಿರ್ಮಾಣ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ನೂತನ ಆಡಳಿತ ಮಂಡಳಿ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ಆಶಿಸಿದರು. ಸಂಘದ ಸದಸ್ಯರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮತ್ತು ಗೃಹ ನಿರ್ಮಾಣ ಯೋಜನೆಗಳನ್ನು ವೇಗಗೊಳಿಸುವುದು ಆಡಳಿತ ಮಂಡಳಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕಾರ್ಯದರ್ಶಿ ಎ.ಜಿ. ಸುಧೀರ್ ಮಾತನಾಡಿ, ವಕೀಲರ...
ಮೈಸೂರು:- ಸಮರ್ಥನಂ ಅಂಗವಿಕಲರ ಸಂಸ್ಥೆಯ 29ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯ ಆವರಣದಲ್ಲಿಂದು ವಿಕಲಚೇತನರಿಗೆ ವಿವಿಧ ಸಹಾಯಕ ಸಾಧನ ಸಲಕರಣೆಗಳನ್ನು...
ಮೈಸೂರು, ಫೆ.27: ರಾಜ್ಯ ಸರ್ಕಾರ 2026ನೇ ಸಾಲಿನ ಬಜೆಟ್ ಮಂಡನೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಅಭಿವೃದ್ಧಿ ಆದ್ಯತೆಗಳ ಕುರಿತು ಪ್ರಜ್ಞಾವಂತ ಮತದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಮೈಸೂರು ಜಿಲ್ಲೆಯ ನಾಗರಿಕರು ಅಭಿಪ್ರಾಯಪಟ್ಟರು. ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಮುಖಂಡರು, ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆಡಳಿತದಲ್ಲಿ ಸ್ಥಿರತೆ ಕಾಣಿಸದೆ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಗುಂಪುಗಾರಿಕೆ, ಪದೇಪದೇ ದೆಹಲಿಗೆ ಭೇಟಿ, ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದಾಗಿ ಆರೋಪಿಸಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಖಜಾನೆ ಮೇಲೆ ಹೆಚ್ಚಿನ ಹೊರೆ ಬಿದ್ದಿದ್ದು, ಇದರ ಪರಿಣಾಮವಾಗಿ ಕೆಲವು ಸರ್ಕಾರಿ ಇಲಾಖೆಗಳಲ್ಲಿ ಮತ್ತು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ವೇತನ ವಿತರಣೆ ವಿಳಂಬವಾಗುತ್ತಿರುವ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಸಾವಿರಾರು ನಿರುದ್ಯೋಗಿ ಯುವಕರು ಉದ್ಯೋಗದ ಬೇಡಿಕೆ ಇಟ್ಟುಕೊಂಡು...
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 27:- ಪರಿಶಿಷ್ಟ ಜಾತಿಯ ಬಲಗೈ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಈಗ ಜಾರಿಗೆ ತಂದಿರುವ ವರದಿಯನ್ನು ರದ್ದುಪಡಿಸಬೇಕು...