ಮೈಸೂರು, ಫೆ.23: ಮೈಸೂರು ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇತ್ತೀಚಿನ ದಾಳಿಯಲ್ಲಿ ರೂ.10,30,800 ಮೌಲ್ಯದ 103...
ಮೈಸೂರು, ಫೆ.23:- ಆದಿವಾಸಿಗಾಳು ಪ್ರಪಂಚದ ಅತ್ಯಂತ ಪುರಾತನ ಸಂಸ್ಕೃತಿ ಮತ್ತು ಜ್ಞಾನದ ವಾರಸುದಾರರು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಎಂ.ಆರ್. ಗಂಗಾಧರ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಡೆದ ಬುಡಕಟ್ಟು ಜನರ ಆರೋಗ್ಯ ಮತ್ತು ಆರೋಗ್ಯ ರಕ್ಷಣಾ ಪದ್ಧತಿಗಳ ಮೇಲೆ ಜಾಗತೀಕರಣ ಮತ್ತು ಸಾಂಸ್ಕೃತಿಕ ನಂಬಿಕೆಗಳ ಪ್ರಭಾವ ಕುರಿತು ನಡೆದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಎಂದರೆ ಕೇವಲ ಔಷಧ ಮತ್ತು ಆಸ್ಪತ್ರೆಯಲ್ಲ ಅದು ಪೌಷ್ಠಿಕತೆ. ನಂಬಿಕೆ, ಪಾರಂಪರಿಕತೆ ಮತ್ತು ಅಸ್ಮಿತೆಯನ್ನು ಒಳಗೊಂಡಿದೆ. ಆದಿವಾಸಿಗಳ ವಿಶೇಷವಾದ ಜ್ಞಾನ ಜಾಗತೀಕರಣದಲ್ಲಿ ಸ್ಥಾನ ಪಲ್ಲಟಗೊಳ್ಳುತ್ತಿದೆ. ಇದನ್ನೂ ಓದಿ:- ಫೆಬ್ರುವರಿ 30 ಸಿನಿಮಾ ಬಿಡುಗಡೆಗೆ ಉತ್ತಮ ಸ್ಪಂದನೆ: ನಿರ್ದೇಶಕ ಎಂ.ಎಲ್. ಪ್ರಶಾಂತ್ ಜಾಗತೀಕರಣವು ಅನುಕೂಲ ಮತ್ತು ಅನಾನುಕೂಲ ಎರಡನ್ನು...
ಮೈಸೂರು:- 2030ರ ವೇಳೆಗೆ ಜಗತ್ತಿನಾದ್ಯಂತ ಸುಮಾರು 800 ಮಿಲಿಯನ್ ಜನರು ಉದ್ಯೋಗಕ್ಕಾಗಿ ಎದುರು ನೋಡಲಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಸರ್ಕಾರಗಳು ಹಾಗೂ ಉದ್ಯೋಗ...
ಮೈಸೂರು: ಸಾಂಸ್ಕೃತಿಕ ನಗರಿಯ ಪರಿಸರ ಸಂರಕ್ಷಣೆ ಮತ್ತು ನಾಗರಿಕರ ಆರೋಗ್ಯ ವೃದ್ಧಿಯ ಆಶಯದೊಂದಿಗೆ ಆಯೋಜಿಸಲಾಗಿದ್ದ ‘ಮೈಸೂರು ಸೈಕಲ್ ದಿನ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಮೈಸೂರು ಮಹಾನಗರ...
ಮೈಸೂರು: ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಜಾಗತಿಕ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ವರ್ತನೆ ರಾಷ್ಟ್ರದ ಗೌರವಕ್ಕೆ ಧಕ್ಕೆಯುಂಟುಮಾಡುವಂತದ್ದಾಗಿದೆ ಎಂದು ಮೈಸೂರು ಮಹಾನಗರ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿರೋಧ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದ್ದರೂ, ದೇಶದ ಘನತೆಯನ್ನು ಹಾನಿಗೊಳಿಸುವ ರೀತಿಯ ನಡೆ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಜಾಗತಿಕ ವೇದಿಕೆಯಲ್ಲಿ ಅಸಭ್ಯ ರೀತಿಯ ಪ್ರತಿಭಟನೆ ನಡೆಸಿರುವುದು ಕಾಂಗ್ರೆಸ್ನ ಹೊಣೆಗಾರಿಕೆಯ ಕೊರತೆಯನ್ನು ತೋರಿಸುತ್ತದೆ. ದೇಶದ ಹಿತಕ್ಕಿಂತ ಪಕ್ಷಪರ ರಾಜಕೀಯವೇ ಮೇಲು ಎನ್ನುವ ಮನೋಭಾವವೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷ ದೇಶದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ವಿವಾದಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯುವಪೀಳಿಗೆಯನ್ನು ತಪ್ಪು ದಾರಿಗೆ ದೂಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಅವರು ಹೇಳಿದರು. ಕರ್ನಾಟಕದಲ್ಲಿ...
ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚುಂಚಗಹಳ್ಳಿ ಗ್ರಾಮದ ವಿನೋದ್ ಹಾಗೂ ಕಾವ್ಯಾ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇತ್ತೀಚೆಗೆ ಕುಟುಂಬದವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಕಾವ್ಯಾ ಮನೆಯವರು ಈ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕಳೆದ ಗುರುವಾರ ಈ ಜೋಡಿ ಮದುವೆಯಾಗಿದ್ದು, ಮದುವೆಯ ನಂತರ ಗ್ರಾಮದಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಮಗಳ ಮದುವೆಯಿಂದ ಆಕ್ರೋಶಗೊಂಡಿದ್ದ ಕಾವ್ಯಾ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಅಳಿಯ ವಿನೋದ್ ಅವರ ಮನೆಗೆ ಹೋಗಿ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಉಪಕರಣಗಳು, ಬಟ್ಟೆಬರೆ, ಗೃಹೋಪಯೋಗಿ ಸಾಮಗ್ರಿಗಳು ಹಾಗೂ ಅಡುಗೆ...
ಮೇಷ: ಹಣಕಾಸಿನ ವ್ಯವಹಾರದಲ್ಲಿ ಲಾಭ ಗಳಿಕೆ. ತಾಮ್ರ, ಬೆಳ್ಳಿ ವ್ಯಾಪಾರಸ್ಥರಿಗೆ ಬೇಡಿಕೆ, ರೇಷ್ಮೆ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುತ್ತದೆ. ಶುಭಸಂಖ್ಯೆ: 5 ವೃಷಭ: ತಾಂತ್ರಿಕ ಪದವೀಧರರಿಗೆ ಕೃಷಿಯತ್ತ ಒಲವು. ಮಹಿಳಾ ವೈದ್ಯರಿಗೆ ವಿಶೇಷ ದಿನ. ಬ್ಯಾಂಕಿಂಗ್ ಉದ್ಯೋಗಿಗಳಿಗೆ ವರ್ಗಾವಣೆ. ಶುಭಸಂಖ್ಯೆ:8 ಮಿಥುನ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಭಿವೃದ್ಧಿ. ವಾಹನ ಚಾಲಕರಿಗೆ ಅನಿರೀಕ್ಷಿತ ಲಾಭ. ವಿವಾಹಕ್ಕೆ ಕಂಕಣ ಕೂಡಿಬರಲಿದೆ. ಶುಭಸಂಖ್ಯೆ:7 ಕಟಕ: ಸಮಾಜಸೇವೆಯಿಂದ ಜನಪ್ರಿಯತೆ. ಮಕ್ಕಳ ಆರೋಗ್ಯ ಗಮನಿಸಿ. ರಾಜಕೀಯದಲ್ಲಿ ಯಶ. ಸೀರೆ ವ್ಯಾಪಾರದಿಂದ ಹಣ ಗಳಿಕೆ. ಶುಭಸಂಖ್ಯೆ:2 ಸಿಂಹ: ಚರ್ಮವ್ಯಾಧಿ ಬಾಧಿಸೀತು ಎಚ್ಚರ. ಹಾಡುಗಾರರಿಗೆ ಉತ್ತಮ ಅವಕಾಶ. ಕಲಾವಿದರು, ಸಮಾಜ ಸೇವಕರಿಗೆ, ಶುಭದಾಯಕ ದಿನ. ಶುಭಸಂಖ್ಯೆ: 3 ಕನ್ಯಾ: ಪೂಜಾ ಸಾಮಗ್ರಿ ವ್ಯಾಪಾರಿಗಳಿಗೆ ಆದಾಯ. ಅಡಕೆ ಫಸಲಿಗೆ ಬೇಡಿಕೆ. ಉದ್ಯೋಗಸ್ಥ ಮಹಿಳೆಯರ ಆರ್ಥಿಕತೆಯಲ್ಲಿ ಚೇತರಿಕೆ. ಶುಭಸಂಖ್ಯೆ: 2 ತುಲಾ: ಕಬ್ಬಿಣ ,ಮರಳು ಮಾರಾಟಸ್ಥರಿಗೆ ಅಧಿಕಾರಿಗಳಿಂದ ಕಿರಿಕಿರಿ....