ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಏ. 10:- ಎಲ್ಲರನ್ನು ಒಂದುಗೂಡಿಸಿಕೊಂಡು ಮಾಡುವ ಹಬ್ಬ ಸಾಮರಸ್ಯದಿಂದ ಒಂದುಗೂಡಿ ಬಾಳುವ ವ್ಯವಸ್ಥೆ ಇದನ್ನು ಬಹಳ ಅಚ್ಚುಕಟ್ಟಾಗಿ ಮಾಡಿರುವ...
ವರದಿ:ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ, ಏಪ್ರಿಲ್ 10: ತಂಬಾಕು ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆಯನ್ನು ತಕ್ಷಣ ಪರಿಹರಿಸಿ, ಪ್ರತಿ ಕೆಜಿಗೆ ಕನಿಷ್ಠ ರೂ.300 ನಿಗದಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ಚಪ್ಪರದಹಳ್ಳಿ ಅಜಿತ್ ಒತ್ತಾಯಿಸಿದರು. ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಮಾರುಕಟ್ಟೆ ಆರಂಭವಾದ ವೇಳೆ ಉತ್ತಮ ಗುಣಮಟ್ಟದ ತಂಬಾಕಿಗೆ ಪ್ರತಿ ಕೆಜಿಗೆ ರೂ.250 ರಿಂದ 320ರವರೆಗೆ ಬೆಲೆ ನೀಡಲಾಗುತ್ತಿತ್ತು. ಆದರೆ ಕೆಲವೇ ದಿನಗಳಲ್ಲಿ ಬೆಲೆ ಏಕಾಏಕಿ ಸುಮಾರು ರೂ.100ಕ್ಕಿಂತಲೂ ಕಡಿಮೆಗೆ ಇಳಿದಿದ್ದು, ರೈತರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ತಂಬಾಕು ಮಂಡಳಿ ಹಾಗೂ ಖರೀದಿದಾರ ಕಂಪನಿಗಳು ರೈತರಲ್ಲಿ ಭಿನ್ನಾಭಿಪ್ರಾಯ ಉಂಟುಮಾಡುವ ಉದ್ದೇಶದಿಂದ ಕೆಲ ರೈತರನ್ನು ಮಧ್ಯವರ್ತಿಗಳಂತೆ ಬಳಸಿಕೊಂಡು ಅವರಿಗೆ ಮಾತ್ರ ಉತ್ತಮ ಬೆಲೆ ನೀಡುತ್ತಿರುವ ಬಗ್ಗೆ ದೂರುಗಳು...
ವರದಿ: ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ, ಏಪ್ರಿಲ್ 10: ಪರಿಶ್ರಮದ ಪಥದಲ್ಲಿ ನಡೆದ ಹೆಜ್ಜೆಗಳು ಕೆಲವೊಮ್ಮೆ ಮಿಂಚಿನಂತೆ ಫಲ ಕೊಡುತ್ತವೆ… ಅದಕ್ಕೆ ಜೀವಂತ ಉದಾಹರಣೆಯಾಗಿ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿ ಕುಮಾರಿ ನಿಶ್ಚಲ ಹೊರಹೊಮ್ಮಿದ್ದಾರೆ. 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅವರು, ಶೇಕಡಾ 97.83 (587 ಅಂಕ) ಗಳಿಸಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಅವರ ಈ ಸಾಧನೆ ಶಿಕ್ಷಣ ವಲಯದಲ್ಲಿ ಹೆಮ್ಮೆ ಮೂಡಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಕ್ಷರ ಪಿಯು ಕಾಲೇಜಿನ ಗೌರವವನ್ನು ಮತ್ತಷ್ಟು ಎತ್ತಿದೆ. ಕುಮಾರಿ ನಿಶ್ಚಲ ಅವರು ಮೂಲತಃ ಕೊಪ್ಪಲ ಜಿಲ್ಲೆಯ ತಂದ್ರಿಗುಡಿ ಗ್ರಾಮದ ನಿವಾಸಿಗಳಾದ ಕುಮಾರ್ ಹಾಗೂ ವಿಶಾಲಾಕ್ಷಿ ದಂಪತಿಯ ಪುತ್ರಿ. ಆರ್ಥಿಕ ಹಾಗೂ ಸಾಮಾಜಿಕ ಸವಾಲುಗಳ...
ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆ ಮೈಸೂರು, ಏಪ್ರಿಲ್ 10: ಕೇಂದ್ರ ಸರ್ಕಾರದಿಂದ ಪುರಸ್ಕೃತವಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ನೂರಕ್ಕೆ ನೂರು ಪ್ರಮಾಣದಲ್ಲಿ ಪೂರ್ಣಗೊಳಿಸುವತ್ತ...
10-04-2026 ಶುಕ್ರವಾರದ ರಾಶಿ ದಿನಭವಿಷ್ಯ ಮೇಷ ರಾಶಿ (Aries) 10-04-2026, ಶುಕ್ರವಾರದ ರಾಶಿ ದಿನಭವಿಷ್ಯ ನಿಮ್ಮ ದಿನವು ಹೊತ್ತಿ ಉರಿಯುವ ದೀಪದಂತೆ ಪ್ರಜ್ವಲಿಸುತ್ತಿದೆ. ಬೆಳಿಗ್ಗೆಯಿಂದಲೇ ನಿಮ್ಮೊಳಗಿನ ಉತ್ಸಾಹ ಮತ್ತು ಆತ್ಮವಿಶ್ವಾಸ ಹೆಚ್ಚಾಗಿ ಕಾಣಿಸುತ್ತದೆ. ನೀವು ಹಿಡಿದ ಕೆಲಸಗಳು ಒಂದೊಂದಾಗಿ ಸರಿಯಾಗಿ ಮುನ್ನಡೆಯುತ್ತವೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ಗಮನ ಸೆಳೆಯುವ ಸಾಧ್ಯತೆ ಇದೆ. ನಿಮ್ಮ ಕಾರ್ಯನಿಷ್ಠೆ ಇಂದು ಫಲ ನೀಡಲಿದೆ. ಆದರೆ ಮಾತಿನಲ್ಲಿನ ತುರ್ತುತನ ಕೆಲವೊಮ್ಮೆ ಸಣ್ಣ ಗೊಂದಲಗಳನ್ನು ಸೃಷ್ಟಿಸಬಹುದು. ಆದ್ದರಿಂದ ಮಾತನಾಡುವಾಗ ಸ್ವಲ್ಪ ಯೋಚಿಸಿ ಮಾತಾಡುವುದು ಉತ್ತಮ. ವ್ಯವಹಾರಸ್ಥರಿಗೆ ಹೊಸ ಒಪ್ಪಂದಗಳು ಅಥವಾ ಸಂಪರ್ಕಗಳು ಲಾಭಕರವಾಗಬಹುದು. ಹಣಕಾಸಿನಲ್ಲಿ ಚಿಕ್ಕ ಮಟ್ಟದ ಲಾಭ ಕಂಡರೂ, ಅತಿಯಾದ ಖರ್ಚು ತಪ್ಪಿಸುವುದು ಒಳಿತು. ಕುಟುಂಬದ ವಾತಾವರಣ ಸಾಮಾನ್ಯವಾಗಿ ಶಾಂತವಾಗಿರುತ್ತದೆ. ಆದರೆ ಹಿರಿಯರ ಮಾತುಗಳಿಗೆ ಗೌರವ ಕೊಡುವುದು ದಿನವನ್ನು ಇನ್ನಷ್ಟು ಸುಂದರಗೊಳಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಬಹುದು. ಆರೋಗ್ಯದ ವಿಷಯದಲ್ಲಿ ಸಾಮಾನ್ಯ...
ವರದಿ: ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ :- ಪಿರಿಯಾಪಟ್ಟಣದ ಯುವ ಕಲಾವಿದ ನವೀನ್ ರಾಜ್ ಅಭಿನಯದ ಪವಿತ್ರ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಹೈಕ್ಲು ಕಿಚ್ಚು ಚಲನಚಿತ್ರದ ಮುಹೂರ್ತ ಪಿರಿಯಾಪಟ್ಟಣದ...
ವರದಿ: ರವಿಚಂದ್ರ ಬೂದಿತಿಟ್ಟು ಕಂಪಲಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅತ್ಯುನ್ನತ ಸಾಧನೆ ಮಾಡಿ ಗ್ರಾಮಕ್ಕೆ ಹೆಮ್ಮೆ ತಂದಿದ್ದಾಳೆ. ಪಿರಿಯಾಪಟ್ಟಣ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವಣಿ ಎಸ್ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 525 ಅಂಕಗಳನ್ನು ಗಳಿಸುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಮ್ಮ ಶ್ರಮ, ಪರಿಶ್ರಮ ಮತ್ತು ಏಕಾಗ್ರತೆಯಿಂದ ಅವರು ಈ ಸಾಧನೆಯನ್ನು ಮಾಡಿದ್ದಾರೆ. ಶ್ರಾವಣಿ ಎಸ್ ಅವರು ಶಿಕ್ಷಣದಲ್ಲಿ ನಿರಂತರ ಸಾಧನೆ ತೋರಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಈ ಹಿಂದೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿಯೂ 554 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಇದರಿಂದಲೇ ಅವರ ಶೈಕ್ಷಣಿಕ ಸಾಮರ್ಥ್ಯ ಸ್ಪಷ್ಟವಾಗುತ್ತದೆ. ಕಂಪಲಾಪುರದ ವಿಜಯವಾಣಿ ವರದಿಗಾರ ಸದಾಶಿವ ಅವರ ಪುತ್ರಿಯಾದ ಶ್ರಾವಣಿ, ತಮ್ಮ ತಂದೆ-ತಾಯಿಯ ಪ್ರೋತ್ಸಾಹ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಈ ಮಟ್ಟದ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ. “ನಿಯಮಿತ ಓದು,...
ವರದಿ: ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ: 2026–27ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ತಾಲೂಕಿನ ವಿದ್ಯಾರ್ಥಿನಿಯೊಬ್ಬಳು ಗಮನಾರ್ಹ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾಳೆ. ತಾಲೂಕಿನ ಕಂಪಲಾಪುರ ಗ್ರಾಮದ ಪತ್ರಿಕಾವರದಿಗಾರರಾದ ಪಿ.ಆರ್. ರಾಜೇಶ್ ಹಾಗೂ ಲತಾ ದಂಪತಿಗಳ ಪುತ್ರಿ ತೃಪ್ತಿ ಆರ್ ಅವರು ವಿಜ್ಞಾನ ವಿಭಾಗದಲ್ಲಿ ಶೇಕಡಾ 85ರಷ್ಟು ಅಂಕಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಮ್ಮ ಪರಿಶ್ರಮ ಮತ್ತು ಏಕಾಗ್ರತೆಯಿಂದ ಅವರು ಈ ಸಾಧನೆ ಮಾಡಿದ್ದಾರೆ. ತೃಪ್ತಿ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನುಕುರಳಿಯಲ್ಲಿ ಇರುವ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅವರ ಒಡೆತನದ ಪ್ರತಿಷ್ಠಿತ ಎಸ್ಟಿಜಿ ವಿಜ್ಞಾನ ವಿಭಾಗದ ಪಿಯು ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಒಟ್ಟು 507 ಅಂಕಗಳನ್ನು ಪಡೆದು ಮೆಚ್ಚುಗೆ ಗಳಿಸಿದ್ದಾರೆ. ವಿಷಯವಾರು ಅಂಕಗಳ ವಿವರ ಗಮನಿಸಿದರೆ, ಕನ್ನಡದಲ್ಲಿ 92,...
ವರದಿ: ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ: ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ದುರಾಲೋಚನೆಯ ಫಲ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ.ಎಸ್. ಮಂಜುನಾಥ್ ಅವರು ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಪೊಲೀಸ್ ಠಾಣೆ ಸಮೀಪದ ಮುಖ್ಯ ರಸ್ತೆಯಲ್ಲಿ ನನ್ನ ಹೆಸರಿನಲ್ಲಿ 67×35 ಅಳತೆಯ ನಿವೇಶನವಿದ್ದು, ಆ ಜಾಗದಲ್ಲಿ ಶೆಡ್ ನಿರ್ಮಿಸಿ ಬಾಡಿಗೆಗೆ ನೀಡಲಾಗಿದೆ. ಈ ಜಾಗಕ್ಕೆ ಸಂಬಂಧಿಸಿದಂತೆ ಕೆಲವರು ಅನಾವಶ್ಯಕವಾಗಿ ವಿವಾದ ಸೃಷ್ಟಿಸಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು. ಇತ್ತೀಚೆಗೆ ಬೆಟ್ಟದಪುರ ಗ್ರಾಮದ ಲೇಟ್ ಮಲ್ಲೇಗೌಡರ ಪುತ್ರ ಶಂಕರೇಗೌಡ ಹಾಗೂ ಅವರ ಕುಟುಂಬದವರು, ಈ ಜಾಗ ನಮ್ಮದೇ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಖಾಸಗಿ ಯೂಟ್ಯೂಬ್ ಚಾನೆಲ್ಗಳ...
ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಪ್ರಭಾವಿ ರಾಜಕೀಯ ಮುಖಂಡರೊಬ್ಬರು ಜಮೀನು ತಮ್ಮ ಹೆಸರಿಗೆ ಬರೆದುಕೊಡಲು ಒತ್ತಾಯಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ...