ಮೈಸೂರು: ನಗರದ ವಿವಿಧೆಡೆ ಕಳೆದ ಡಿಸೆಂಬರ್ನಿಂದೀಚೆಗೆ ಎಲ್ಲೆಂದರಲ್ಲಿ ಏಕಾಏಕಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಇದರಿಂದ ಅನುಕೂಲದ ಬದಲು ಸಮಸ್ಯೆಯೇ ಹೆಚ್ಚಾಗಿದೆ. ಹೀಗಾಗಿ ಇವುಗಳನ್ನು ಅಳವಡಿಸುವ ಮುನ್ನ ಯಾವುದಾದರೂ ಸರ್ವೆ ನಡೆದಿದೆಯೇ, ಪಾಲಿಕೆ, ಮುಡಾ, ಭಾರತೀಯ ರಸ್ತೆ ಕಾಂಗ್ರೆಸ್ನ ಅನುಮತಿ ಪಡೆಯಲಾಗಿದೆಯೇ ಎಂದು ತಾವು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿದ್ದ ಪ್ರಶ್ನೆಗಳಿಗೆ ಪೊಲೀಸ್ ಆಯುಕ್ತರು ನಕಾರಾತ್ಮಕ ಉತ್ತರ ನೀಡಿದ್ದಾರೆ ಎಂದು ಹಿರಿಯ ವಕೀಲ ಎ.ಎಂ.ಭಾಸ್ಕರ್ ಬೇಸರ ವ್ಯಕ್ತಪಡಿಸಿದರು. ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲ್ಲೆಲ್ಲ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಸಿದ ಬಳಿಕ ಜನದಟ್ಟಣೆ, ಸಂಚಾರ ದಟ್ಟಣೆ ಗೊಂದಲಕಾರಿಯಾಗಿ ಕಂಡು ಬರುತ್ತಿರುವುದು ತಮ್ಮ ಗಮನಕ್ಕೆ ಬಂತು. ಹೀಗಾಗಿ ಈ ಕುರಿತು ಪೊಲೀಸ್ ಆಯುಕ್ತರಿಗೆ ಆರ್ಟಿಐ ಅಡಿಯಲ್ಲಿ ಅರ್ಜಿ ಹಾಕಿ ಯಾವ ಯಾವ ವೃತ್ತದಲ್ಲಿ ಸರ್ವೆ ನಡೆದಿದೆ, ಎಷ್ಟು ವೆಚ್ಚವಾಗಿದೆ, ಸಂಬಂಧಿಸಿದವರ ಅನುಮತಿ ಪಡೆಯಲಾಗಿದೆಯೇ ಎಂಬಿವೇ ಮೊದಲಾದ ೧೪ ಪ್ರಶ್ನೆ...
ಮೈಸೂರು: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವುದು ಯುದ್ಧ ಅಂತ್ಯವಾಗಿ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂದು ಎಂದು ಒತ್ತಾಯಿಸಿ ಜನಸ್ಪಂದನ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಶಾಂತಿ ಸಂದೇಶ...
ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆ ತಾಲೂಕು: ತಾಲೂಕಿನ ಹ್ಯಾಂಡ್ ಪೋಸ್ಟ್ ಜಕ್ಕಳ್ಳಿ ಸಮೀಪದಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಾನುಗಳು ಸುಟ್ಟು ಕರಕಲಾದ...
ಮೈಸೂರು: ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ...
ಮೈಸೂರು: ಭಾರತೀಯ ಜನತಾ ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂದಿನ ರಾಜಕೀಯ ಕಾರ್ಯಯೋಜನೆಗಳ ಕುರಿತು ಮಹತ್ವದ ಚರ್ಚೆಗಳು ಮೈಸೂರಿನಲ್ಲಿ ನಡೆದವು. ಭಾರತ ಸರ್ಕಾರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಬಿಜೆಪಿ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿರುವ ಡಾ. ಈ.ಸಿ. ನಿಂಗರಾಜ್ ಗೌಡರು ಭೇಟಿ ಮಾಡಿ ಪಕ್ಷದ ವಿವಿಧ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಮಾತುಕತೆ ನಡೆಸಿದರು. ಈ ವೇಳೆ ಮೈಸೂರು ವಿಭಾಗದಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಕ್ರಮಗಳು, ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಕ್ರಿಯತೆ ಹೆಚ್ಚಿಸುವ ಯೋಜನೆಗಳು ಹಾಗೂ ಯುವಕರನ್ನು ಹೆಚ್ಚು ಸಂಖ್ಯೆಯಲ್ಲಿ ಪಕ್ಷದತ್ತ ಆಕರ್ಷಿಸುವ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಮುಂದಿನ ಚುನಾವಣಾ ಸನ್ನಾಹದ ಅಂಗವಾಗಿ ಕೈಗೊಳ್ಳಬೇಕಾದ ತಂತ್ರಗಳು, ಸಾರ್ವಜನಿಕ ಸಂಪರ್ಕ ಅಭಿಯಾನಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಸಹ ವಿಶೇಷ ಗಮನ ಹರಿಸಲಾಯಿತು. ಡಾ. ನಿಂಗರಾಜ್ ಗೌಡರು ಮೈಸೂರು ಭಾಗದಲ್ಲಿ ನಡೆಯುತ್ತಿರುವ...
ಬೆಂಗಳೂರು: ರಾಜ್ಯದ ಬಿಯರ್ ಮಾರುಕಟ್ಟೆಯಲ್ಲಿ ದಶಕಗಳಿಂದ ಪಾರುಪತ್ಯ ಮೆರೆಯುತ್ತಿದ್ದ ಹಳೆಯ ಹಾಗೂ ದಿಗ್ಗಜ ಬ್ರ್ಯಾಂಡ್ಗಳಿಗೆ ಈಗ ಹೊಸ ಸವಾಲು ಎದುರಾಗಿದೆ. ಎಸ್ಒಎಂ (SOM) ಗ್ರೂಪ್ ಆಫ್ ಕಂಪನೀಸ್ನ ಅಂಗಸಂಸ್ಥೆಯಾದ ‘ವುಡ್ಪೆಕ್ಕರ್ ಡಿಸ್ಟಿಲರೀಸ್ ಅಂಡ್ ಬ್ರೂವರೀಸ್’ ಮಾರುಕಟ್ಟೆಗೆ ಪರಿಚಯಿಸಿರುವ ಸ್ವದೇಶಿ ಬಿಯರ್ ‘ಸನ್ನಿ ಬೀಚಸ್’ (Sunny Beaches), ಅತ್ಯಲ್ಪ ಅವಧಿಯಲ್ಲೇ ಗ್ರಾಹಕರ ಗಮನ ಸೆಳೆಯುವ ಮೂಲಕ ಭರ್ಜರಿ ಯಶಸ್ಸು ಕಂಡಿದೆ. ಮಾರುಕಟ್ಟೆ ಪ್ರವೇಶಿಸಿದ ಕೆಲವೇ ತಿಂಗಳುಗಳಲ್ಲಿ ಈ ಬ್ರ್ಯಾಂಡ್ ಶೇ. 3ಕ್ಕೂ ಅಧಿಕ ಮಾರುಕಟ್ಟೆ ಪಾಲನ್ನು ತನ್ನದಾಗಿಸಿಕೊಂಡಿದೆ. ಅಚ್ಚರಿಯೆಂದರೆ, ಕೇವಲ ಫೆಬ್ರವರಿ ತಿಂಗಳೊಂದರಲ್ಲೇ 12 ಲಕ್ಷಕ್ಕೂ ಹೆಚ್ಚು ‘ಸನ್ನಿ ಬೀಚಸ್’ ಬಿಯರ್ ಬಾಟಲಿಗಳು ಮಾರಾಟವಾಗಿದ್ದು, ಮಾರುಕಟ್ಟೆಯಲ್ಲಿರುವ ಹಳೆಯ ದಿಗ್ಗಜ ಬ್ರ್ಯಾಂಡ್ಗಳನ್ನು ಹಿಂದಿಕ್ಕಿ ಮುನ್ನುಗ್ಗುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ರಾಜ್ಯದ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಈ ಹೊಸ ರುಚಿಯನ್ನು ಸವಿದಿದ್ದಾರೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಬೆಂಗಳೂರು, ಮೈಸೂರು, ಮಂಗಳೂರು...
10.2 ಕೋಟಿ ಉಳಿತಾಯದ “ಸ್ವಚ್ಚ ಮೈಸೂರು” ಬಜೆಟ್: ಸ್ವಚ್ಛತೆ, ಹಸಿರು ಮತ್ತು ಡಿಜಿಟಲ್ ಸೇವೆಗಳಿಗೆ ಮಹಾನಗರಪಾಲಿಕೆಯ ಮಹತ್ವಾಕಾಂಕ್ಷಿ ಯೋಜನೆ ಮೈಸೂರು, ಮಾ.25: ನಗರವನ್ನು ಸ್ವಚ್ಛತೆ ಮತ್ತು ಪರಿಸರ...
ಮೈಸೂರು, ಮಾ.25: ಕಣ್ಣಿನ ಆರೋಗ್ಯದ ಮೇಲೆ ಮೌನವಾಗಿ ದಾಳಿ ಮಾಡುವ ಗಂಭೀರ ಕಾಯಿಲೆಯಾದ ಗ್ಲಾಕೋಮಾವನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿದರೆ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬಹುದು ಎಂದು ಜೆಎಸ್ಎಸ್...