Latest News

ಕೊಪ್ಪಳದಲ್ಲಿ ‘ಲವ್ ಜಿಹಾದ್’ ಆರೋಪ: ಯುವಕನ ಮೊಬೈಲ್‌ನಲ್ಲಿ ಅನೇಕ ಯುವತಿಯರ ಫೋಟೋ ವೀಡಿಯೋ ಪತ್ತೆ, ತನಿಖೆಗೆ ಒತ್ತಾಯ

ಕೊಪ್ಪಳ, ಏಪ್ರಿಲ್ 11:-  ಹುಬ್ಬಳ್ಳಿಯ ನಂತರ ಇದೀಗ ಕೊಪ್ಪಳ ಜಿಲ್ಲೆಯಲ್ಲಿಯೂ ‘ಲವ್ ಜಿಹಾದ್’ ಆರೋಪ ಕೇಳಿಬಂದಿದ್ದು, ಯುವಕನೊಬ್ಬನ ಮೊಬೈಲ್‌ನಲ್ಲಿ ಅನೇಕ ಯುವತಿಯರ ಫೋಟೋ ಹಾಗೂ ವೀಡಿಯೋಗಳು ಪತ್ತೆಯಾದ ಪ್ರಕರಣ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಯುವಕನ ವಿರುದ್ಧ ಈ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಪರಿಚಯ ಮಾಡಿಕೊಂಡು ಆಕೆಯನ್ನು ತನ್ನ ಪ್ರೀತಿಗೆ ಒಳಪಡಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಇಬ್ಬರೂ ಹಲವು ಕಡೆಗಳಿಗೆ ತೆರಳಿದ್ದು, ಸಂಬಂಧ ಗಾಢವಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ :- ಮದುವೆಯಾಗುವುದಾಗಿ  ನಂಬಿಸಿ ಕೈಕೊಟ್ಟ ಇಂಜಿನಿಯರ್ : ಫೋಟೋ ವೀಡಿಯೋ ಸಾಕ್ಷ್ಯಗಳೊಂದಿಗೆ ಮಹಿಳೆಯ ದೂರು ಮೂರು ದಿನಗಳ ಹಿಂದೆ ಜಿಲ್ಲಾಸ್ಪತ್ರೆ ಸಮೀಪ ಇಬ್ಬರೂ ಇದ್ದಾಗ ಕೆಲವು...
Latest News

ಮದುವೆಯಾಗುವುದಾಗಿ  ನಂಬಿಸಿ ಕೈಕೊಟ್ಟ ಇಂಜಿನಿಯರ್ : ಫೋಟೋ ವೀಡಿಯೋ ಸಾಕ್ಷ್ಯಗಳೊಂದಿಗೆ ಮಹಿಳೆಯ ದೂರು

ರಾಯಚೂರು, ಏಪ್ರಿಲ್ 11:- ಪ್ರೀತಿ ಮತ್ತು ಮದುವೆ ಎಂಬ ಭರವಸೆಯನ್ನು ನಂಬಿಸಿ ದೀರ್ಘಕಾಲ ಸಂಬಂಧ ಮುಂದುವರಿಸಿ ಬಳಿಕ ಮದುವೆಗೆ ನಿರಾಕರಿಸಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬ ಇಂಜಿನಿಯರ್ ವಿರುದ್ಧ ಅತಿಥಿ ಶಿಕ್ಷಕಿಯೊಬ್ಬರು ದೂರು ನೀಡಿದ್ದು, ಕಾಲೇಜು ದಿನಗಳಿಂದಲೇ ಇಬ್ಬರೂ ಪರಸ್ಪರ ಪರಿಚಯ ಹೊಂದಿ ನಂತರ ಪ್ರೀತಿಯಲ್ಲಿ ಮುಳುಗಿದ್ದೇವೆ ಎಂದು ಹೇಳಿದ್ದಾರೆ. ಆರಂಭದಲ್ಲಿ ಸ್ನೇಹವಾಗಿ ಆರಂಭವಾದ ಈ ಸಂಬಂಧ ಕ್ರಮೇಣ ಗಾಢವಾಗಿದ್ದು, ಸುಮಾರು 7-8 ವರ್ಷಗಳ ಕಾಲ ಇಬ್ಬರೂ ಹತ್ತಿರವಾಗಿದ್ದರು ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ. ಮಹಿಳೆಯ ಆರೋಪದ ಪ್ರಕಾರ, ಮಲ್ಲಿಕಾರ್ಜುನ್ ತಾನು ಮದುವೆಯಾಗುವುದಾಗಿ ನಂಬಿಸಿ ಅನೇಕ ಬಾರಿ ಶಾರೀರಿಕ ಸಂಬಂಧ ಬೆಳೆಸಿದ್ದಾನೆ. ಮಂತ್ರಾಲಯ, ಆಲಮಟ್ಟಿ...
Latest News

11-04-2026 ರ ರಾಶಿ ದಿನಭವಿಷ್ಯ

ಮೇಷ ರಾಶಿ (Aries) 11-04-2026 ಶನಿವಾರದ ದಿನಭವಿಷ್ಯ ನಿಮ್ಮ ದಿನವು ಒಂದು “ಬೆಂಕಿಯ ಚಿಗುರು” ಹಾಗೆ ಆರಂಭವಾಗಿ ನಿಧಾನವಾಗಿ ಹೊತ್ತಿ ಉರಿಯುವಂತೆ ಸಾಗುತ್ತದೆ. ಬೆಳಿಗ್ಗೆ ಸಮಯದಲ್ಲಿ ನೀವು ಚುರುಕುತನದಿಂದ ಕೆಲಸಗಳನ್ನು ಹಿಡಿದುಕೊಳ್ಳುತ್ತೀರಿ. ಬಹಳ ದಿನಗಳಿಂದ ಬಾಕಿ ಉಳಿದ ಕೆಲಸಗಳನ್ನು ಮುಗಿಸಲು ಇದು ಸೂಕ್ತ ಸಮಯ. ನಿಮ್ಮ ಆತ್ಮವಿಶ್ವಾಸ ಇಂದು ಹೆಚ್ಚಾಗಿ ಕಾಣುತ್ತದೆ, ಆದರೆ ಅದೇ ಸಮಯದಲ್ಲಿ ಅತಿಯಾದ ಆತುರದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಕೆಲಸದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮೌಲ್ಯ ಸಿಗುತ್ತದೆ. ಹಿರಿಯರಿಂದ ಮೆಚ್ಚುಗೆ ದೊರೆಯುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಜೊತೆ ಮಾತನಾಡುವಾಗ ನೇರ ಮಾತು ನಿಮ್ಮ ಶಕ್ತಿಯಾಗಬಹುದು, ಆದರೆ ಸ್ವಲ್ಪ ಮೃದುವಾಗಿ ಮಾತನಾಡಿದರೆ ಇನ್ನಷ್ಟು ಒಳ್ಳೆಯ ಫಲ ಸಿಗುತ್ತದೆ. ವ್ಯಾಪಾರದಲ್ಲಿರುವವರಿಗೆ ಸಣ್ಣ ಲಾಭಗಳು ಕಾಣಬಹುದು, ಆದರೆ ದೊಡ್ಡ ಹೂಡಿಕೆಗಳನ್ನು ಮುಂದೂಡುವುದು ಒಳಿತು. ಹಣಕಾಸಿನ ವಿಷಯದಲ್ಲಿ “ಇಂದು ಉಳಿಸಿದ ಒಂದು ರೂಪಾಯಿ ನಾಳೆಯ ಶಕ್ತಿ” ಅನ್ನೋ ಮಾತು ನಿಮಗೆ...
Latest News

ಇಂತಹ ಹಬ್ಬಗಳನ್ನು ಉಳಿಸಬೇಕು : ಗ್ರಾಮಸ್ಥರ ಒಗ್ಗಟ್ಟು ನೋಡಿ ಮೆಚ್ಚಿದ ಸಾರಾ ಮಹೇಶ್

ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಏ. 10:- ಎಲ್ಲರನ್ನು ಒಂದುಗೂಡಿಸಿಕೊಂಡು ಮಾಡುವ ಹಬ್ಬ ಸಾಮರಸ್ಯದಿಂದ ಒಂದುಗೂಡಿ ಬಾಳುವ ವ್ಯವಸ್ಥೆ ಇದನ್ನು ಬಹಳ ಅಚ್ಚುಕಟ್ಟಾಗಿ ಮಾಡಿರುವ...
Latest News

ತಂಬಾಕು ಬೆಲೆ ಕುಸಿತ: ಪ್ರತಿ ಕೆಜಿಗೆ ರೂ.300 ನಿಗದಿ ಮಾಡುವಂತೆ ರೈತ ಸಂಘ ಆಗ್ರಹ

ವರದಿ:ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ, ಏಪ್ರಿಲ್ 10: ತಂಬಾಕು ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆಯನ್ನು ತಕ್ಷಣ ಪರಿಹರಿಸಿ, ಪ್ರತಿ ಕೆಜಿಗೆ ಕನಿಷ್ಠ ರೂ.300 ನಿಗದಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ಚಪ್ಪರದಹಳ್ಳಿ ಅಜಿತ್ ಒತ್ತಾಯಿಸಿದರು. ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಮಾರುಕಟ್ಟೆ ಆರಂಭವಾದ ವೇಳೆ ಉತ್ತಮ ಗುಣಮಟ್ಟದ ತಂಬಾಕಿಗೆ ಪ್ರತಿ ಕೆಜಿಗೆ ರೂ.250 ರಿಂದ 320ರವರೆಗೆ ಬೆಲೆ ನೀಡಲಾಗುತ್ತಿತ್ತು. ಆದರೆ ಕೆಲವೇ ದಿನಗಳಲ್ಲಿ ಬೆಲೆ ಏಕಾಏಕಿ ಸುಮಾರು ರೂ.100ಕ್ಕಿಂತಲೂ ಕಡಿಮೆಗೆ ಇಳಿದಿದ್ದು, ರೈತರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ತಂಬಾಕು ಮಂಡಳಿ ಹಾಗೂ ಖರೀದಿದಾರ ಕಂಪನಿಗಳು ರೈತರಲ್ಲಿ ಭಿನ್ನಾಭಿಪ್ರಾಯ ಉಂಟುಮಾಡುವ ಉದ್ದೇಶದಿಂದ ಕೆಲ ರೈತರನ್ನು ಮಧ್ಯವರ್ತಿಗಳಂತೆ ಬಳಸಿಕೊಂಡು ಅವರಿಗೆ ಮಾತ್ರ ಉತ್ತಮ ಬೆಲೆ ನೀಡುತ್ತಿರುವ ಬಗ್ಗೆ ದೂರುಗಳು...
Latest News

ವೈದ್ಯಕೀಯ ಕನಸಿನತ್ತ ಹೆಜ್ಜೆ ಗ್ರಾಮೀಣ ಪ್ರತಿಭೆಗೆ ಗರಿ: ನಿಶ್ಚಲ ಸಾಧನೆಗೆ ಎಲ್ಲೆಡೆ ಮೆಚ್ಚುಗೆ

ವರದಿ: ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ, ಏಪ್ರಿಲ್ 10: ಪರಿಶ್ರಮದ ಪಥದಲ್ಲಿ ನಡೆದ ಹೆಜ್ಜೆಗಳು ಕೆಲವೊಮ್ಮೆ ಮಿಂಚಿನಂತೆ ಫಲ ಕೊಡುತ್ತವೆ… ಅದಕ್ಕೆ ಜೀವಂತ ಉದಾಹರಣೆಯಾಗಿ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿ ಕುಮಾರಿ ನಿಶ್ಚಲ ಹೊರಹೊಮ್ಮಿದ್ದಾರೆ. 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅವರು, ಶೇಕಡಾ 97.83 (587 ಅಂಕ) ಗಳಿಸಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಅವರ ಈ ಸಾಧನೆ ಶಿಕ್ಷಣ ವಲಯದಲ್ಲಿ ಹೆಮ್ಮೆ ಮೂಡಿಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಕ್ಷರ ಪಿಯು ಕಾಲೇಜಿನ ಗೌರವವನ್ನು ಮತ್ತಷ್ಟು ಎತ್ತಿದೆ. ಕುಮಾರಿ ನಿಶ್ಚಲ ಅವರು ಮೂಲತಃ ಕೊಪ್ಪಲ ಜಿಲ್ಲೆಯ ತಂದ್ರಿಗುಡಿ ಗ್ರಾಮದ ನಿವಾಸಿಗಳಾದ ಕುಮಾರ್ ಹಾಗೂ ವಿಶಾಲಾಕ್ಷಿ ದಂಪತಿಯ ಪುತ್ರಿ. ಆರ್ಥಿಕ ಹಾಗೂ ಸಾಮಾಜಿಕ ಸವಾಲುಗಳ...
Latest News

ಕೇಂದ್ರ ಯೋಜನೆಗಳ ಶೇಕಡಾ 100 ಸಾಧನೆಗೆ ಒತ್ತಾಯ: ಹೆಚ್.ಡಿ.ಕುಮಾರಸ್ವಾಮಿ

ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆ ಮೈಸೂರು, ಏಪ್ರಿಲ್ 10: ಕೇಂದ್ರ ಸರ್ಕಾರದಿಂದ ಪುರಸ್ಕೃತವಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳನ್ನು ನೂರಕ್ಕೆ ನೂರು ಪ್ರಮಾಣದಲ್ಲಿ ಪೂರ್ಣಗೊಳಿಸುವತ್ತ...
Latest News

10-04-2026 ಶುಕ್ರವಾರದ ರಾಶಿ ದಿನಭವಿಷ್ಯ

10-04-2026 ಶುಕ್ರವಾರದ ರಾಶಿ ದಿನಭವಿಷ್ಯ   ಮೇಷ ರಾಶಿ (Aries) 10-04-2026, ಶುಕ್ರವಾರದ ರಾಶಿ ದಿನಭವಿಷ್ಯ ನಿಮ್ಮ ದಿನವು ಹೊತ್ತಿ ಉರಿಯುವ ದೀಪದಂತೆ ಪ್ರಜ್ವಲಿಸುತ್ತಿದೆ. ಬೆಳಿಗ್ಗೆಯಿಂದಲೇ ನಿಮ್ಮೊಳಗಿನ ಉತ್ಸಾಹ ಮತ್ತು ಆತ್ಮವಿಶ್ವಾಸ ಹೆಚ್ಚಾಗಿ ಕಾಣಿಸುತ್ತದೆ. ನೀವು ಹಿಡಿದ ಕೆಲಸಗಳು ಒಂದೊಂದಾಗಿ ಸರಿಯಾಗಿ ಮುನ್ನಡೆಯುತ್ತವೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ಗಮನ ಸೆಳೆಯುವ ಸಾಧ್ಯತೆ ಇದೆ. ನಿಮ್ಮ ಕಾರ್ಯನಿಷ್ಠೆ ಇಂದು ಫಲ ನೀಡಲಿದೆ. ಆದರೆ ಮಾತಿನಲ್ಲಿನ ತುರ್ತುತನ ಕೆಲವೊಮ್ಮೆ ಸಣ್ಣ ಗೊಂದಲಗಳನ್ನು ಸೃಷ್ಟಿಸಬಹುದು. ಆದ್ದರಿಂದ ಮಾತನಾಡುವಾಗ ಸ್ವಲ್ಪ ಯೋಚಿಸಿ ಮಾತಾಡುವುದು ಉತ್ತಮ. ವ್ಯವಹಾರಸ್ಥರಿಗೆ ಹೊಸ ಒಪ್ಪಂದಗಳು ಅಥವಾ ಸಂಪರ್ಕಗಳು ಲಾಭಕರವಾಗಬಹುದು. ಹಣಕಾಸಿನಲ್ಲಿ ಚಿಕ್ಕ ಮಟ್ಟದ ಲಾಭ ಕಂಡರೂ, ಅತಿಯಾದ ಖರ್ಚು ತಪ್ಪಿಸುವುದು ಒಳಿತು. ಕುಟುಂಬದ ವಾತಾವರಣ ಸಾಮಾನ್ಯವಾಗಿ ಶಾಂತವಾಗಿರುತ್ತದೆ. ಆದರೆ ಹಿರಿಯರ ಮಾತುಗಳಿಗೆ ಗೌರವ ಕೊಡುವುದು ದಿನವನ್ನು ಇನ್ನಷ್ಟು ಸುಂದರಗೊಳಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಅವಕಾಶ ಸಿಗಬಹುದು. ಆರೋಗ್ಯದ ವಿಷಯದಲ್ಲಿ ಸಾಮಾನ್ಯ...
Latest News

ಪವಿತ್ರ ಪ್ರೊಡಕ್ಷನ್ ನ ಹೈಕ್ಳು ಕಿಚ್ಚು ಚಲನಚಿತ್ರದ ಮುಹೂರ್ತಕ್ಕೆ ಚಾಲನೆ

ವರದಿ: ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ :- ಪಿರಿಯಾಪಟ್ಟಣದ ಯುವ ಕಲಾವಿದ ನವೀನ್ ರಾಜ್ ಅಭಿನಯದ ಪವಿತ್ರ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಹೈಕ್ಲು ಕಿಚ್ಚು ಚಲನಚಿತ್ರದ ಮುಹೂರ್ತ ಪಿರಿಯಾಪಟ್ಟಣದ...
Latest News

ಕಂಪಲಾಪುರದ ಶ್ರಾವಣಿ ಭರ್ಜರಿ 525 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆಗೆ ಅಭಿನಂದನೆಗಳ ಮಹಾಪೂರ

ವರದಿ: ರವಿಚಂದ್ರ ಬೂದಿತಿಟ್ಟು ಕಂಪಲಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅತ್ಯುನ್ನತ ಸಾಧನೆ ಮಾಡಿ ಗ್ರಾಮಕ್ಕೆ ಹೆಮ್ಮೆ ತಂದಿದ್ದಾಳೆ. ಪಿರಿಯಾಪಟ್ಟಣ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವಣಿ ಎಸ್ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 525 ಅಂಕಗಳನ್ನು ಗಳಿಸುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಮ್ಮ ಶ್ರಮ, ಪರಿಶ್ರಮ ಮತ್ತು ಏಕಾಗ್ರತೆಯಿಂದ ಅವರು ಈ ಸಾಧನೆಯನ್ನು ಮಾಡಿದ್ದಾರೆ. ಶ್ರಾವಣಿ ಎಸ್ ಅವರು ಶಿಕ್ಷಣದಲ್ಲಿ ನಿರಂತರ ಸಾಧನೆ ತೋರಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ 554 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಇದರಿಂದಲೇ ಅವರ ಶೈಕ್ಷಣಿಕ ಸಾಮರ್ಥ್ಯ ಸ್ಪಷ್ಟವಾಗುತ್ತದೆ. ಕಂಪಲಾಪುರದ ವಿಜಯವಾಣಿ ವರದಿಗಾರ ಸದಾಶಿವ ಅವರ ಪುತ್ರಿಯಾದ ಶ್ರಾವಣಿ, ತಮ್ಮ ತಂದೆ-ತಾಯಿಯ ಪ್ರೋತ್ಸಾಹ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಈ ಮಟ್ಟದ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ. “ನಿಯಮಿತ ಓದು,...
1 2 3 61
Page 1 of 61