ತಂಬಾಕು ರೈತರ ಹಿತ ಕಾಯಬೇಕು: ಕನಿಷ್ಠ ಬೆಂಬಲ ಬೆಲೆಯೊಂದಿಗೆ ಖರೀದಿಗೆ ಎಚ್.ಡಿ.ಕುಮಾರಸ್ವಾಮಿ ಸೂಚನೆ
ಮೈಸೂರು: ರಾಜ್ಯದ ತಂಬಾಕು ರೈತರು ಸಂಕಷ್ಟಕ್ಕೆ ಸಿಲುಕದಂತೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿ ತಕ್ಷಣವೇ ತಂಬಾಕು ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಂಬಾಕು ಮಂಡಳಿ ಮತ್ತು ಖರೀದಿದಾರರಿಗೆ ಸ್ಪಷ್ಟ ಸೂಚನೆ ನೀಡಿದರು. ಮೈಸೂರಿನಲ್ಲಿ ತಂಬಾಕು ಮಂಡಳಿಯ ವತಿಯಿಂದ ನಡೆಯುತ್ತಿರುವ ಎಫ್ಸಿವಿ (FCV) ತಂಬಾಕು ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ತಂಬಾಕು ವರ್ತಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು....



