Latest News

ನಾಡಹಬ್ಬ ದಸರಾ ಉತ್ಸವಕ್ಕೆ ಈ ಬಾರಿ ಹೆಚ್ಚುವರಿ 2 ಆನೆಗಳ ಆಯ್ಕೆ ಒಟ್ಟು 14 ಆನೆಗಳ ಆಯ್ಕೆ, ಅರಣ್ಯ ಇಲಾಖೆ.

ಮೈಸೂರು: ಕೋವಿಡ್ ಭೀತಿಯ ನಡುವೆ ಈ ಬಾರಿಯೂ ನಾಡಹಬ್ಬ ದಸರಾ ಉತ್ಸವಕ್ಕೆ ಸಿದ್ಧತೆ ಪ್ರಾರಂಭಿಸಲಾಗಿದೆ. ದಸರಾ ಉತ್ಸವದ ಪ್ರಮುಖ ಆಕರ್ಷಣೆಯ ಕೇಂದ್ರಬಿಂದುವಾದ ಜಂಬೂಸವಾರಿ ಮೆರವಣಿಗೆಗೆ ಅರಣ್ಯ ಇಲಾಖೆ ಈ ಬಾರಿ 14 ಆನೆಗಳನ್ನು ಆಯ್ಕೆ ಮಾಡಿದೆ. ದಸರಾ ಆಚರಣೆ ಸಂಬಂಧ ಹೈ ಪವರ್ ಕಮಿಟಿ ಸಭೆಗೂ ಮುನ್ನ ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಅರಣ್ಯಧಿಕಾರಿಗಳು 14 ಆನೆಗಳನ್ನ ಆಯ್ಕೆ ಮಾಡಿದ್ದಾರೆ. ಚಾಮರಾಜನಗರ ಮತ್ತು ಕೊಡುಗೆ ಜಿಲ್ಲೆಗಳ ವಿವಿಧ ಆನೆ ಶಿಬಿರಗಳಲ್ಲಿರುವ ಆನೆಗಳನ್ನು ದಸರಾ...
Latest News

ಜೆಡಿಎಸ್ ಪಕ್ಷದಿಂದ ಹೊರಗುಳಿಯಲು ನಿರ್ಧರಿಸಿದ – ಜಿ.ಟಿ.ಡಿ

ಮೈಸೂರು: ಜೆಡಿಎಸ್ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದ ಶಾಸಕ  ಜಿ.ಟಿ ದೇವೇಗೌಡ ಮಂಗಳವಾರ ಜೆಡಿಎಸ್ ಪಕ್ಷದಿಂದ ಹೊರಗುಳಿಯುವ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಪ್ರಕಟಿಸಿದರು. ನನ್ನನ್ನು ಕ್ಷಮಿಸಿ ಅಪ್ಪಾಜಿ (ಎಚ್.ಡಿ. ದೇವೇಗೌಡ) ನಾನು ವಿಧಾಸನಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ. ನನಗೆ ಹಾಗೂ ನನ್ನ ಮಗನಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ.  ನಿಮ್ಮ ಆಶೀರ್ವಾದ ಹೀಗೆ ಇರಲಿ. ನಾನು ಅವಧಿ ಪೂರ್ಣಗೊಳಿಸುವವರೆಗೆ ಜೆಡಿಎಸ್‌ನಲ್ಲಿ ಇರುತ್ತೇನೆ...
Latest News

ರಾಗಿಣಿ, ಸಂಜನಾಗೆ ಎದುರಾಯಿತು ಸಂಕಷ್ಟ: ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ದೃಢ

ಬೆಂಗಳೂರು: ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್​ ಸೇವಿಸಿರುವುದು ಎಫ್.ಎಸ್.ಎಲ್. ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ನಟಿಯರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್.ಎಸ್.ಎಲ್. ಪರೀಕ್ಷೆಯಲ್ಲಿ ದೃಢವಾಗಿದೆ. ಸಂಜನಾ ಗಲ್ರಾನಿ, ರಾಗಿಣಿ ತಲೆ ಅವರ ತಲೆ ಕೂದಲನ್ನು 2020ರ ಅಕ್ಟೋಬರ್​​ನಲ್ಲಿ ಹೈದರಾಬಾದ್​’ನ ಪ್ರಯೋಗಾಲಯಕ್ಕೆ ಎಫ್.ಎಸ್.ಎಲ್. ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ಪರೀಕ್ಷಾ ಫಲಿತಾಂಶ ಸಿಸಿಬಿ ಪೊಲೀಸರ ಕೈಸೇರಿದೆ.  ಪರೀಕ್ಷಾ...
Latest News

ಪ್ರಾಣಿಗಳನ್ನ ದತ್ತು ಪಡೆದ ಅಭಿಮಾನಿಗಳಿಗೆ ಖುದ್ದು ಡಿ ಬಾಸ್ ದರ್ಶನ್‌ರಿಂದಲೇ ಪ್ರಮಾಣ ಪತ್ರ ವಿತರಣೆ.

ಮೈಸೂರು- ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಟ್ಟ ಆ ಒಂದು ಕರೆಯ ಮೇರೆಗೆ ಕೋಟಿ ಕೋಟಿ ಆದಾಯ ರಾಜ್ಯದ ಮೃಗಾಲಯಕ್ಕೆ ಹರಿದು ಬಂದಿತ್ತು. ಈ ವೇಳೆ ಹಲವರು ಪ್ರಾಣಿಗಳನ್ನು ದತ್ತು ಸ್ವೀಕಾರ ಮಾಡಿದ್ದರು. ಮಾತ್ರವಲ್ಲ ಇವರಿಗೆಲ್ಲ ನಟ ದರ್ಶನ ಅವರೇ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಅರ್ಪಿಸಿದ್ದರು. ಈ ಸಾಲಿನಲ್ಲಿ ದರ್ಶನ್ ಅವರ ಅಭಿಮಾನಿಗಳು ಸಹ ದೊಡ್ಡ ಮಟ್ಟದಲ್ಲಿ ಪ್ರಾಣಿಗಳನ್ನ ದತ್ತು ಸ್ವೀಕಾರ ಮಾಡಿದ್ದರು. ಅವರಿಗಾಗಿ ಇಂದು ಮೈಸೂರು ಮೃಗಾಲಯದಲ್ಲಿ...
Latest News

ಮೈಸೂರಿನಲ್ಲಿ ಚಿನ್ನಾಭರಣ ದರೋಡೆಗೆ ಯತ್ನ : ಚಿನ್ನದ ವ್ಯಾಪಾರಿ ಮೇಲೆ ಗುಂಡಿನ ದಾಳಿ..!

ಮೈಸೂರು: ನಗರದ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಚಿನ್ನಾಭರಣ ಮಳಿಗೆಯೊಂದರಲ್ಲಿ ದರೋಡೆಗೆ ಯತ್ನಿಸಿದ ಮೂವರು ದರೋಡೆಕೋರರು ಚಿನ್ನಾಭರಣ ವರ್ತಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಮಾಲೀಕ ಧರ್ಮೇಂದ್ರ ಎಂಬವರೇ ಗಾಯಗೊಂಡವರು. ವಿದ್ಯಾರಣ‍್ಯಪುರಂನ ಮುಖ್ಯ ರಸ್ತೆಯಲ್ಲಿರುವ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ದರೋಡೆಗೆ ಯತ್ನಿಸಿದರು. ದರೋಡೆಗೆ ಯತ್ನಿಸಿದ ಸಂದರ್ಭ ಮಾಲೀಕ ಧರ್ಮೇಂದ್ರ ತಡೆಯೊಡ್ಡಿದರು. ಈ ಸಂದರ್ಭ ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ...
Latest News

ಸಾಧನೆಗೆ ತಾರತಮ್ಯವಿಲ್ಲ, ನಿಗದಿತ ತಯಾರಿ ಮುಖ್ಯ.

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಸಿಇಟಿ ತರಬೇತಿ ಸಮಾರೋಪದಲ್ಲಿ ಸಿಸಿಎಫ್ ಟಿ. ಹೀರಾಲಾಲ್ ನುಡಿ ಸಾಧನೆ ಎನ್ನುವುದು ಸುಲಭವಾಗಿ ಬರುವುದಿಲ್ಲ. ಅದಕ್ಕೆ ನಗರ ಪ್ರದೇಶ, ಗ್ರಾಮೀಣ ಎನ್ನುವ ತಾರತಮ್ಯವಿಲ್ಲ. ಸತತವಾಗಿ ಅಧ್ಯಯನ ಮಾಡಿ ಗುರಿ ಸಾಧನೆಯಿಂದ ಹಿಂದೆ ಸರಿಯದವರು ಖಂಡಿತಾ ಯಶಸ್ವಿಯಾಗುತ್ತಾರೆ ಎಂದು ಮೈಸೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಟಿ.ಹೀರಾಲಾಲ್ ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಜ್ಞಾನೋದಯ ಪದವಿ ಪೂರ್ವ...
Latest News

ಸಾಂಸ್ಕೃತಿಕ ನಗರಿಯಲ್ಲಿ ದರೋಡೆ, ಗುಂಡಿನ ಸುರಿಮಳೆ: ಓರ್ವ ಅಮಾಯಕ ಯುವಕ ಬಲಿ

ಸಾಂಸ್ಕೃತಿಕ ನಗರಿಯಲ್ಲಿ ಮಂಗಳವಾರ ಚಿನ್ನಾಭರಣ ದರೋಡೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಅಮಾಯಕ ಯುವಕ ಬಲಿಯಾಗಿದ್ದಾರೆ. ಹಾಡಹಗಲೇ ನಡೆದ ಘಟನೆಯು ನಾಗರಿಕರನ್ನು ಬೆಚ್ಚಿಬೀಳಿಸಿದೆ. ಸಾಂಸ್ಕೃತಿಕ ನಗರಿಯಲ್ಲಿ ಇಂದು ಗುಂಡಿನ ಸುರಿಮಳೆಗೈದಿದೆ. ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಕೈಕಾಲು ಕಟ್ಟಿ ಚೆನ್ನಾಗಿ ಥಳಿಸಿ ಕದೀಮರು ದರೋಡೆ ಮಾಡಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ವಿದ್ಯಾರಣ್ಯಪುರಂ ಅಮೃತ ಗೋಲ್ಡ್ ಪ್ಯಾಲೇಸ್‌ನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಗುಂಡಿನ ದಾಳಿಗೆ...
Latest News

ಮಕ್ಕಳಿಗೆ ಹಾಲು ನೀಡಿ ಬಸವಪಂಚಮಿ ಆಚರಣೆ

ಅಮೃತಕ್ಕೆ ಸಮಾನವಾದ ಹಾಲು ಹಾವಿನ ಆಹಾರವಲ್ಲ, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ನೀಡುವ ಮೂಲಕ ಮೌಢ್ಯತೆಯಿಂದ ಹೊರಬಂದು ಆರೋಗ್ಯಕರ ಸಮಾಜವನ್ನು ಕಟ್ಟುವ ಹಬ್ಬ ನಾಗರ ಪಂಚಮಿಯಾಗಬೇಕೆಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಹೇಳಿದರು. ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಸವಫೌಂಡೇಶನ್ ಆಯೋಜಿಸಿದ್ದ ಬಸವಪಂಚಮಿ ಕಾರ್ಯಕ್ರಮದಲ್ಲಿ ಬಡಮಕ್ಕಳಿಗೆ ಹಾಲು ಹಾಗೂ ಹಣ್ಣನ್ನು ವಿತರಿಸಿ ಅವರು ಮಾತನಾಡಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ೧೨ನೇ ಶತಮಾನದಲ್ಲೇ ಭದ್ರ ಬುನಾದಿ ಹಾಕಿದ ವಿಶ್ವಗುರು...
Latest News

ವಿವಿಧ ಯೋಜನೆಗಳಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2021-2022ನೇ ಸಾಲಿನಲ್ಲಿ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಗಾಗಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ (ಸ್ವಸಹಾಯ ಗುಂಪುಗಳಿಗೆ), ಐರಾವತ ಯೋಜನೆ ಮತ್ತು ಭೂ ಒಡೆತನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಗಸ್ಟ್ 5ರಿಂದ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ವಿವರ:-ಸ್ವಯಂ ಉದ್ಯೋಗ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ,...
kayakayogi_askmysuru
Mandya

ಕಾಯಕಯೋಗಿ – ದೈನಂದಿನ ಸುದ್ದಿ – Aug 08 2021

ವಿಶ್ವಾಸ ಅನ್ನುವುದು ತಾತ್ಕಾಲಿಕವಾಗಬಾರದು. ಶ್ವಾಸವಿರುವವರೆಗೂ ಅದು ನಮ್ಮ ಜತೆ ಇರುವಂತೆ ನೋಡಿಕೊಂಡಾಗಲಷ್ಟೇ ಬದುಕು ಸಾರ್ಥಕ. ಇಡುವ ಪ್ರತಿ ಹೆಜ್ಜೆಯೂ ವಿಶ್ವಾಸದಿಂದ ಕೂಡಿರಲಿ ಹಸಿದವನಿಗೆ ಅನ್ನ - ವಿದ್ಯೆ ನೀಡುವುದೇ ನಿಜವಾದ ಧರ್ಮ.. ನೊಂದವರಿಗೆ ಆಸರೆಯಾಗಿ... ಕತ್ತಲಿಗೆ ಹಣತೆಯಾಗಿ ಬದುಕಿದಾಗ ಜೀವನ ಸಾರ್ಥಕ. - ಸಿದ್ದಗಂಗಾ ಶ್ರೀ ಮನುಷ್ಯ ಒಳ್ಳೆಯವನಾಗಲೂ ಒಳ್ಳೆಯ ಪ್ರಯತ್ನಗಳನ್ನು ಮಾಡುತ್ತಿರುವವರೊಂದಿಗೆ ಕೈಜೋಡಿಸಿದರೆ ಆ ಒಳಿತಿನ ಲೇಪ ಅವನಿಗೂ ಆಗುತ್ತದೆ. ಯಾವ ಮನುಷ್ಯ ಊರ ನಾಲೆ ಅಗೆಯಲು ಕೈಜೋಡಿಸುತ್ತಾನೋ,...
1 14 15 16 17 18 27
Page 16 of 27