ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……
ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ.ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ, ಅವರ ಪ್ರತಿಷ್ಠೆಗಾಗಿ, ಪ್ರಜಾಪ್ರಭುತ್ವದ ಹೆಸರಿನಲ್ಲಿ ಮತದಾನ ಮಾಡಬೇಕು. ಅವರನ್ನುನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇವರುಗಳನ್ನು ಹೊರತುಪಡಿಸಿ ನಮ್ಮಲ್ಲಿ ಮತ್ಯಾರಿಗೂ ಸ್ಪರ್ಧಿಸುವ ಸಾಮರ್ಥ್ಯವೂ ಇಲ್ಲ, ಅವಕಾಶ ಇಲ್ಲ. ಏಕೆಂದರೆ ಇದು ಪ್ರಜಾಪ್ರಭುತ್ವ !!!!!!ಇಡೀ ಆಡಳಿತ ವ್ಯವಸ್ಥೆ, ಬಹುತೇಕ ಎಲ್ಲಾ ಮಂತ್ರಿಗಳು, ಶಾಸಕರು, ವಿರೋಧ ಪಕ್ಷದವರು, ಎಲ್ಲಾ ಜಾತಿಯ ನಾಯಕರು, ಮಾಧ್ಯಮಗಳು, ಸಾಮಾಜಿಕ...







