ಸರ್ಕಾರಿ ಆಸ್ತಿಯನ್ನು ಉಳಿಸಿದ ಶಾಸಕ ಟಿ.ಎಸ್. ಶ್ರೀವತ್ಸರಿಗೆ ನಾಗರಿಕರಿಂದ ಅಭಿನಂದನೆ
ಮೈಸೂರು:- ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಲು ಮುಂದಾಗಿ ಕ್ರಮ ಕೈಗೊಂಡಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಅಗ್ರಹಾರದಲ್ಲಿರುವ ಶಾಸಕರ ಕಚೇರಿಯಲ್ಲಿ ಪ್ರಜ್ಞಾವಂತ ನಾಗರಿಕರು ಸನ್ಮಾನಿಸಿ ಅಭಿನಂದಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಹಳೆಯ ಮೈಸೂರಿನ ಸೌಂದರ್ಯ ಮತ್ತು ಪರಂಪರೆಯ ವೈಶಿಷ್ಟ್ಯವನ್ನು ಹಾಳು ಮಾಡುವ ಪ್ರಯತ್ನಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೆ.ಸಿ. ಬಡಾವಣೆಯಲ್ಲಿರುವ ಅಮೂಲ್ಯ ಸರ್ಕಾರಿ ಜಾಗವನ್ನು ಕಬಳಿಕೆಗಳಿಂದ ರಕ್ಷಿಸಲು ಶಾಸಕ...







