Latest News

ಮೈಸೂರು ಸಿಸಿಬಿ ಪೊಲೀಸರ ದಾಳಿ: ರೂ.10.30 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ವಶ – 4 ಆರೋಪಿಗಳ ಬಂಧನ

ಮೈಸೂರು, ಫೆ.23: ಮೈಸೂರು ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇತ್ತೀಚಿನ ದಾಳಿಯಲ್ಲಿ ರೂ.10,30,800 ಮೌಲ್ಯದ 103 ಗ್ರಾಂ 88 ಮಿಲಿ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಸುಮಾರು ರೂ.8 ಲಕ್ಷ ಮೌಲ್ಯದ ಇನೋವಾ ಕಾರನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್...
Latest News

ಆದಿವಾಸಿಗಳು ಪುರಾತನ ಸಂಸ್ಕೃತಿ, ಜ್ಞಾನದ ವಾರಸುದಾರರು : ಎಂ.ಆರ್. ಗಂಗಾಧರ್

ಮೈಸೂರು, ಫೆ.23:- ಆದಿವಾಸಿಗಾಳು ಪ್ರಪಂಚದ ಅತ್ಯಂತ ಪುರಾತನ ಸಂಸ್ಕೃತಿ ಮತ್ತು ಜ್ಞಾನದ ವಾರಸುದಾರರು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಎಂ.ಆರ್. ಗಂಗಾಧರ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಡೆದ ಬುಡಕಟ್ಟು ಜನರ ಆರೋಗ್ಯ ಮತ್ತು ಆರೋಗ್ಯ ರಕ್ಷಣಾ ಪದ್ಧತಿಗಳ ಮೇಲೆ ಜಾಗತೀಕರಣ ಮತ್ತು ಸಾಂಸ್ಕೃತಿಕ ನಂಬಿಕೆಗಳ ಪ್ರಭಾವ ಕುರಿತು ನಡೆದ ಎರಡು...
Latest News

ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹವೆಂದ ಅಮಿತ್ ದೇವರಹಟ್ಟಿ ಆರೋಪ

ಕುಟುಂಬ ರಾಜಕಾರಣ ಆರೋಪ: ಶಾಸಕ ಡಿ.ರವಿಶಂಕರ್ ವಿರುದ್ಧ ಅಮಿತ್ ದೇವರಹಟ್ಟಿ ಟೀಕೆ ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್. ನಗರ. ಫೆ. 23:- ಚುನಾವಣೆ ಕಳೆದು ಮೂರು ವರ್ಷವಾದರು ತನ್ನ ತಂದೆಯನ್ನು ಎಂ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಅಧಿಕಾರವನ್ನು ತಮ್ಮ ಕುಟುಂಬದಲ್ಲಿಯೇ ಇಟ್ಟುಕೊಳ್ಳುವ ಮೂಲಕ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ದ್ರೋಹವೆಸಗಿದ್ದಾರೆ ಎಂದು ಶಾಸಕ ಡಿ ರವಿಶಂಕರ್ ವಿರುದ್ಧ...
Latest News

ಜಾಗತಿಕ ಉದ್ಯೋಗ ಸವಾಲುಗಳಿಗೆ ತಳಮಟ್ಟದ ನವೀನತೆ ಅಗತ್ಯ: ತಜ್ಞರ ಅಭಿಪ್ರಾಯ

ಮೈಸೂರು:- 2030ರ ವೇಳೆಗೆ ಜಗತ್ತಿನಾದ್ಯಂತ ಸುಮಾರು 800 ಮಿಲಿಯನ್ ಜನರು ಉದ್ಯೋಗಕ್ಕಾಗಿ ಎದುರು ನೋಡಲಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಸರ್ಕಾರಗಳು ಹಾಗೂ ಉದ್ಯೋಗ ಕ್ಷೇತ್ರಕ್ಕೆ ಮಾತ್ರ ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ತಳಮಟ್ಟದ ನವೀನ ಪ್ರಯತ್ನಗಳು ಹಾಗೂ ಸಹಸೃಜನ (Co-creation) ಮಾದರಿಗಳ ಅನುಸರಣೆ ಅತ್ಯಂತ ಅಗತ್ಯವಾಗಿದೆ ಎಂದು ರಾಕುಟೆನ್ ಇಂಡಿಯಾ ಎಂಟರ್ಪ್ರೈಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಹಾಗೂ ಬೆಂಗಳೂರು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಂತರರಾಷ್ಟ್ರೀಯ...
Latest News

ಫೆಬ್ರುವರಿ 30 ಸಿನಿಮಾ ಬಿಡುಗಡೆಗೆ ಉತ್ತಮ ಸ್ಪಂದನೆ: ನಿರ್ದೇಶಕ ಎಂ.ಎಲ್. ಪ್ರಶಾಂತ್

ಮೈಸೂರು :- ತಮ್ಮ ನಿರ್ದೇಶನದಲ್ಲಿ ಹಾಗೂ ಜೋಸೆಫ್ ಬೇಬಿ ನಿರ್ಮಾಣದಲ್ಲಿ ಮೂಡಿಬಂದಿರುವ “ಫೆಬ್ರುವರಿ 30” ಹೆಸರಿನ ಸುಮಾರು 93 ನಿಮಿಷಗಳ ಕನ್ನಡ ಚಲನಚಿತ್ರ ಈಗಾಗಲೇ ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಉತ್ತಮ ಸ್ಪಂದನೆ ದೊರೆತಿದೆ ಎಂದು ನಿರ್ದೇಶಕ ಎಂ.ಎಲ್. ಪ್ರಶಾಂತ್ ತಿಳಿಸಿದ್ದಾರೆ. ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಅವರು ಚಲನಚಿತ್ರ ಪ್ರೇಮಿಗಳಿಗೆ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಫೆಬ್ರುವರಿ 30” ಚಿತ್ರವು ರೋಚಕ ಹಾಗೂ ರಹಸ್ಯಮಯ...
Latest News

ಮೈಸೂರಿನಲ್ಲಿ ಸೈಕಲ್ ದಿನದ ಸಂಭ್ರಮ: ಸ್ವಚ್ಛತಾ ಚಾಂಪಿಯನ್ನರಿಗೆ ಪಾಲಿಕೆ ಗೌರವ

ಮೈಸೂರು: ಸಾಂಸ್ಕೃತಿಕ ನಗರಿಯ ಪರಿಸರ ಸಂರಕ್ಷಣೆ ಮತ್ತು ನಾಗರಿಕರ ಆರೋಗ್ಯ ವೃದ್ಧಿಯ ಆಶಯದೊಂದಿಗೆ ಆಯೋಜಿಸಲಾಗಿದ್ದ ‘ಮೈಸೂರು ಸೈಕಲ್ ದಿನ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಮೈಸೂರು ಮಹಾನಗರ ಪಾಲಿಕೆ, ಜಿಐಝಡ್ ಇಂಡಿಯಾ ಸಹಯೋಗದೊಂದಿಗೆ ಇಎಸ್ಎಎಫ್ ಫೌಂಡೇಶನ್ ಇದನ್ನು ಆಯೋಜಿಸಿತ್ತು. ದೇವರಾಜ ಅರಸು ರಸ್ತೆಯಲ್ಲಿ ನಡೆದ ಈ ಅಭಿಯಾನದಲ್ಲಿ ನಗರದ ವಿವಿಧೆಡೆಯಿಂದ 350ಕ್ಕೂ ಹೆಚ್ಚು ಸೈಕಲ್ ಪ್ರೇಮಿಗಳು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಾಲಿಕೆ ಆಯುಕ್ತರಾದ ಶ್ರೀ...
Latest News

ಜಾಗತಿಕ ಶೃಂಗಸಭೆಯ ಘಟನೆ ಕಾಂಗ್ರೆಸ್‌ನ ದುರುದ್ದೇಶ ಮನೋಭಾವಕ್ಕೆ ಸಾಕ್ಷಿ: ಸಂತೋಷ್ ಕುಮಾರ್

ಮೈಸೂರು: ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಜಾಗತಿಕ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ವರ್ತನೆ ರಾಷ್ಟ್ರದ ಗೌರವಕ್ಕೆ ಧಕ್ಕೆಯುಂಟುಮಾಡುವಂತದ್ದಾಗಿದೆ ಎಂದು ಮೈಸೂರು ಮಹಾನಗರ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿರೋಧ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದ್ದರೂ, ದೇಶದ ಘನತೆಯನ್ನು ಹಾನಿಗೊಳಿಸುವ ರೀತಿಯ ನಡೆ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಜಾಗತಿಕ ವೇದಿಕೆಯಲ್ಲಿ ಅಸಭ್ಯ ರೀತಿಯ ಪ್ರತಿಭಟನೆ ನಡೆಸಿರುವುದು ಕಾಂಗ್ರೆಸ್‌ನ ಹೊಣೆಗಾರಿಕೆಯ ಕೊರತೆಯನ್ನು...
Latest News

ಜಿಲ್ಲಾ ಧಾರ್ಮಿಕ ಪರಿಷತ್ತು ಅತಂತ್ರ; ಭಕ್ತರ ಆಸ್ಥೆಗೆ ಕುತ್ತು

ಧಾರ್ಮಿಕ ಆಡಳಿತದಲ್ಲಿ ರಾಜಕೀಯದ ನೆರಳು; ಭಕ್ತರ ಆಸ್ಥೆಗೆ ಹಾಸನದಲ್ಲಿ ಕುತ್ತು : ಹುಂಡಿ ಹಣದ ಮೇಲೆ ಕಣ್ಣು, ಅಭಿವೃದ್ಧಿಗೆ ಬೆನ್ನು…? ರಘುನಂದನ್ ಎಸ್.ಎ ಹಾಸನ ಜಿಲ್ಲೆಯ ಐತಿಹಾಸಿಕ ಮುಜರಾಯಿ ದೇವಾಲಯಗಳು ಮತ್ತು ಸಾಂಪ್ರದಾಯಿಕ ರಥೋತ್ಸವಗಳು ಇಂದು ಆಡಳಿತಾತ್ಮಕ ಅನಾಥಪ್ರಜ್ಞೆಗೆ ತುತ್ತಾಗಿವೆ. ಇದಕ್ಕೆ ಪ್ರಮುಖ ಕಾರಣ, ‘ಜಿಲ್ಲಾ ಧಾರ್ಮಿಕ ಪರಿಷತ್ತು’ ರಚನೆಯಲ್ಲಿ ಸರ್ಕಾರ ತೋರುತ್ತಿರುವ ದಿವ್ಯ ನಿರ್ಲಕ್ಷ್ಯ ಮತ್ತು ಅಧಿಕಾರ ಹಂಚಿಕೆಯ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಜಿದ್ದಾಜಿದ್ದಿ. ಈಗಾಗಲೇ ಹಳೆಯ ಸಮಿತಿ...
Latest News

ಪ್ರೀತಿ ಮದುವೆಗೆ ವಿರೋಧ: ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ ? ಎಲ್ಲವೂ ಭಸ್ಮ

ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚುಂಚಗಹಳ್ಳಿ ಗ್ರಾಮದ ವಿನೋದ್ ಹಾಗೂ ಕಾವ್ಯಾ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇತ್ತೀಚೆಗೆ ಕುಟುಂಬದವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಕಾವ್ಯಾ ಮನೆಯವರು ಈ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೂ...
Latest News

22-02-2026 ರ ದಿನ ಭವಿಷ್ಯ

  ಮೇಷ: ಹಣಕಾಸಿನ ವ್ಯವಹಾರದಲ್ಲಿ ಲಾಭ ಗಳಿಕೆ. ತಾಮ್ರ, ಬೆಳ್ಳಿ ವ್ಯಾಪಾರಸ್ಥರಿಗೆ ಬೇಡಿಕೆ, ರೇಷ್ಮೆ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುತ್ತದೆ. ಶುಭಸಂಖ್ಯೆ: 5 ವೃಷಭ: ತಾಂತ್ರಿಕ ಪದವೀಧರರಿಗೆ ಕೃಷಿಯತ್ತ ಒಲವು. ಮಹಿಳಾ ವೈದ್ಯರಿಗೆ ವಿಶೇಷ ದಿನ. ಬ್ಯಾಂಕಿಂಗ್ ಉದ್ಯೋಗಿಗಳಿಗೆ ವರ್ಗಾವಣೆ. ಶುಭಸಂಖ್ಯೆ:8 ಮಿಥುನ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಭಿವೃದ್ಧಿ. ವಾಹನ ಚಾಲಕರಿಗೆ ಅನಿರೀಕ್ಷಿತ ಲಾಭ. ವಿವಾಹಕ್ಕೆ ಕಂಕಣ ಕೂಡಿಬರಲಿದೆ. ಶುಭಸಂಖ್ಯೆ:7 ಕಟಕ: ಸಮಾಜಸೇವೆಯಿಂದ ಜನಪ್ರಿಯತೆ. ಮಕ್ಕಳ ಆರೋಗ್ಯ ಗಮನಿಸಿ. ರಾಜಕೀಯದಲ್ಲಿ...
1 16 17 18 19 20 52
Page 18 of 52