ಮೈಸೂರಿನಲ್ಲಿ ಕರಾಮುವಿ ಕುಲಪತಿಗೆ ‘ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ’ ಪ್ರಧಾನ
ಮೈಸೂರು, ಮಾ.07: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕರಾಮುವಿ) ಆವರಣದಲ್ಲಿ ಶನಿವಾರ ನಡೆದ ವಿಶೇಷ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ‘ಭಾರತ ರತ್ನ ಡಾ. ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ–2026’ ಪ್ರದಾನ ಮಾಡಲಾಯಿತು. ಬೆಂಗಳೂರಿನ ಸ್ವದೇಶಿ ವಿಜ್ಞಾನ ಆಂದೋಲನ–ಕರ್ನಾಟಕ ವತಿಯಿಂದ ಈ ಪ್ರತಿಷ್ಠಿತ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಸ್ವದೇಶಿ ವಿಜ್ಞಾನ ಆಂದೋಲನದ ಅಧ್ಯಕ್ಷರಾದ ಡಾ. ಎಂ.ಎಸ್. ಜಗದೀಶ್ ಅವರು ಪ್ರೊ. ಶರಣಪ್ಪ...



