ಮಹಿಳಾ ದಿನಾಚರಣೆ ಅಂಗವಾಗಿ ರಾಜಮಾತೆ ಕೆಂಪನಂಜಮಣಿ ಸ್ಮರಣೆ ವೀರ ಸಾವರ್ಕರ್ ಯುವ ಬಳಗದಿಂದ ಕಾರ್ಯಕ್ರಮ
ಮೈಸೂರು, ಮಾ.09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಸೋಮವಾರ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಮೈಸೂರಿನ ರಾಜಮಾತೆ ಕೆಂಪನಂಜಮಣಿ ಅವರ ಸೇವೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಭಾರತ್ ಮಾತೆ ಹಾಗೂ ರಾಜಮಾತೆ ಕೆಂಪನಂಜಮಣಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಮಾತನಾಡಿದ ಬಿಜೆಪಿ ಸಹ ಪ್ರಭಾರಿಗಳಾದ ಡಾ. ಈ.ಸಿ. ನಿಂಗರಾಜ್ ಗೌಡ ಅವರು, ಮೈಸೂರು ನಗರ...






