Latest News

ಮಾ.6 ರಂದು ವಿಕಲಚೇತನರು ಹಾಗೂ ಮಹಿಳೆಯರಿಗೆ ಆರ್ಥಿಕ ಮಟ್ಟ ಸುಧಾರಿಸಲು ಕಾರ್ಯಾಗಾರ: ನಿತೇಶ್ ಪಾಟೀಲ್

ಮೈಸೂರು, ಮಾ.4:- ಮೈಸೂರು ಮಹಾನಗರ ಪಾಲಿಕೆ ವತಿಯಿಂದ  ಮಹಿಳೆಯರು ಹಾಗೂ ವಿಕಲಚೇತನರಿಗೆ ಉದ್ಯೋಗ ಕಲ್ಪಿಸಿ ಆರ್ಥಿಕ‌ ಮಟ್ಟ ಸುಧಾರಿಸಲು  ಮಾಚ್೯ 6 ರಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ರಂಗಚಾರ್ಲು ಪುರಭವನದಲ್ಲಿ ವಿಕಾಸ ಪಥದಲ್ಲಿ ವಿಶೇಷಚೇತನರ ಹಾಗೂ ಮಹಿಳೆಯರ ಹೆಜ್ಜೆ ಸೌರ ಬೆಂಬಲಿತ ಕಾರ್ಯಾಗಾರ ಹಾಗೂ ಜೀವನೋಪಯ ಪರಿಹಾರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ತಿಳಿಸಿದರು. ಅವರು ಇಂದು ಮೈಸೂರು ಮಹಾನಗರ ಪಾಲಿಕೆಯ...
Latest News

ವರುಣಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವುಗೊಳಿಸಿ ಅಭಿವೃದ್ಧಿ : ಡಾ|| ಯತೀಂದ್ರ ಸಿದ್ದರಾಮಯ್ಯ

ಮೈಸೂರು ಮಾ4 : ವರುಣಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಣ್ಣನೀರಾವರಿ ಇಲಾಖೆಯಿಂದ ಅಭಿವೃದ್ಧಿಗೊಳಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ|| ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಯ ಗೆಜ್ಜಗನಹಳ್ಳಿ, ಹಾರೋಪುರ, ಸಾಲುಂಡಿ ಇಗ್ಲಿ ತಾಯೂರು ಗ್ರಾಮಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಗೆಜ್ಜಗನಹಳ್ಳಿಯಲ್ಲಿ ಬಸ್ ನಿಲುಗಡೆ ಕೇಳಿದ್ದೀರಿ, ನಾಲೆಗಳ ಅಭಿವೃದ್ಧಿಪಡಿಸಲು ತಿಳಿಸಿದ್ದೀರಿ, ಚರಂಡಿ ಸ್ವಚ್ಛಗೊಳಿಸಬೇಕು, ಮಕ್ಕಳಿಗೆ ಕೆಲಸ ಕೊಡಿಸಿ ಎಂದಿದ್ದೀರಿ ಅದೇ ರೀತಿ ಹಾರೋಪುರ...
Latest News

ತಂಬಾಕು ರೈತರ ಹಿತ ಕಾಯಬೇಕು: ಕನಿಷ್ಠ ಬೆಂಬಲ ಬೆಲೆಯೊಂದಿಗೆ ಖರೀದಿಗೆ ಎಚ್.ಡಿ.ಕುಮಾರಸ್ವಾಮಿ ಸೂಚನೆ

ಮೈಸೂರು: ರಾಜ್ಯದ ತಂಬಾಕು ರೈತರು ಸಂಕಷ್ಟಕ್ಕೆ ಸಿಲುಕದಂತೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿ ತಕ್ಷಣವೇ ತಂಬಾಕು ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಂಬಾಕು ಮಂಡಳಿ ಮತ್ತು ಖರೀದಿದಾರರಿಗೆ ಸ್ಪಷ್ಟ ಸೂಚನೆ ನೀಡಿದರು. ಮೈಸೂರಿನಲ್ಲಿ ತಂಬಾಕು ಮಂಡಳಿಯ ವತಿಯಿಂದ ನಡೆಯುತ್ತಿರುವ ಎಫ್‌ಸಿವಿ (FCV) ತಂಬಾಕು ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ತಂಬಾಕು ವರ್ತಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು....
Latest News

ಸರ್ಕಾರದ ಯೋಜನೆಗಳು ಬುಡಕಟ್ಟು ಜನರಿಗೆ ನೇರವಾಗಿ ತಲುಪಬೇಕು : ಪ್ರೊ. ಡಿ. ಆನಂದ್

ಮೈಸೂರು, ಮಾ.೦3:- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಅಭಿವೃದ್ಧಿಗೆ ಮಾಡುವ ಯೋಜನೆಗಳು ನೇರವಾಗಿ ಫಲಾನುಭವಿಗೆ ತಲುಪುವಂತೆ ಮಾಡಿದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಾಧ್ಯಾಪಕರಾದ ಪ್ರೊ. ಡಿ. ಆನಂದ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಬುಡಕಟ್ಟು ಜನರ ಕಲ್ಯಾಣ ಕಾರ್ಯಕ್ರಮಗಳ ಕುರಿತ...
Latest News

ಅಧಿಕಾರಿಗಳು ಜನರನ್ನು ಅಲೆಸದೆ ಕೆಲಸ ಮಾಡಿಕೊಡಿ : ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಮಾ.೦3:- ಅಧಿಕಾರಿಗಳು ಜನರನ್ನು ಕಛೇರಿಯಿಂದ ಕಛೇರಿಗೆ ಅಲೆಸದೆ ಕಾಲಮಿತಿಯೊಳಗೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ಶಿವಪುರ, ಹಾರೋಹಳ್ಳಿ, ಲಕ್ಷ್ಮೀಪುರ, ಹಳ್ಳಿಕೆರೆಹುಂಡಿ, ಮೆಲ್ಲಹಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕೆಲವು ಸಮಸ್ಯೆಗಳನ್ನು ಅಲ್ಲೇ ಇದ್ದು ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸಲು ಸೂಚಿಸಿ ಮಾತನಾಡಿದ ಅವರು ವರುಣಾ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಅಭಿವೃದ್ಧಿ ಪಡಿಸಿದ್ದರೂ ಸಹ...
Latest News

₹17 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ – ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾದಕವಸ್ತುಗಳ ವಿರುದ್ಧ ನಗರ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು ಸುಮಾರು ₹17 ಕೋಟಿ ಮೌಲ್ಯದ ವಿವಿಧ ಮಾದಕವಸ್ತುಗಳನ್ನು ಜಪ್ತಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದಲ್ಲಿ ಸಂಘಟಿತ ಜಾಲದ ಮೂಲಕ ದುಬಾರಿ ಬೆಲೆಯ ಮಾದಕವಸ್ತುಗಳನ್ನು ತರಿಸಿ ಪಾರ್ಟಿಗಳು ಹಾಗೂ ಇತರ ಕಡೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳಿಂದ...
Latest News

ನೇಗಿಲಯೋಗಿ ಮಹಿಳಾ ಬಳಗದಿಂದ ಬೆಂಕಿರಹಿತ ಅಡುಗೆ ಸ್ಪರ್ಧೆ – 40ಕ್ಕೂ ಹೆಚ್ಚು ತಿನಿಸುಗಳ ಪ್ರದರ್ಶನ

ಬೆಂಕಿರಹಿತ ಅಡುಗೆ ಸ್ಪರ್ಧೆ ಮೂಲಕ ಮಹಿಳಾ ದಿನಾಚರಣೆಗೆ ಪೂರ್ವಭಾವಿ ಚಾಲನೆ ಮೈಸೂರು :- ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ನೇಗಿಲಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ವತಿಯಿಂದ ಪೂರ್ವಭಾವಿಯಾಗಿ ಬೆಂಕಿರಹಿತ ಅಡುಗೆ ಸ್ಪರ್ಧೆಯನ್ನು ಆಯೋಜಿಸಿ ಮಹಿಳೆಯರ ಸೃಜನಶೀಲತೆ, ಆರೋಗ್ಯಕರ ಅಡುಗೆ ಪದ್ಧತಿ ಹಾಗೂ ಕುಟುಂಬ ಮೌಲ್ಯಗಳನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ನಗರದ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ ಈ ಕಾರ್ಯಕ್ರಮವು ಅಡುಗೆ ಕೌಶಲ್ಯ ಮಾತ್ರವಲ್ಲದೆ ಮಹಿಳಾ ಸಬಲೀಕರಣದ ಸಂದೇಶವನ್ನೂ...
Latest News

ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾ.2:-ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿಗಳಿದ್ದು, ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ...
Latest News

ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ…..

ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ  ಅಭಿಪ್ರಾಯ. ಪ್ರಶ್ನೆ1. ಯುದ್ದವು ಸಾಮಾನ್ಯ...
Latest News

ವಸತಿ ಶಾಲೆ ಮಾಲೀಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಕೃತ್ಯ ಮುಚ್ಚಿಡಲು ಪತ್ನಿಯಿಂದ ಬೆದರಿಕೆ – ದಂಪತಿ ಬಂಧನ

ಬೆಂಗಳೂರು ಗ್ರಾಮಾಂತರ, : ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪೋಷಕರು ಹೆಚ್ಚಿನ ವೆಚ್ಚ ಮಾಡಿ ವಸತಿ ಶಾಲೆಗಳಿಗೆ ಕಳುಹಿಸುವ ಸಂದರ್ಭಗಳಲ್ಲಿ, ಮಕ್ಕಳಿಗೆ ರಕ್ಷಣೆ ನೀಡಬೇಕಾದ ಶಾಲೆಯ ಮಾಲೀಕರೇ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ವಸತಿ ಶಾಲೆಯ ಮಾಲೀಕ ಧನಂಜಯ್ ಎಂಬಾತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದು, ಈ ಕೃತ್ಯವನ್ನು ಮುಚ್ಚಿಹಾಕಲು ಸಹಕರಿಸಿದ್ದ ಆರೋಪದಲ್ಲಿ ಆತನ...
1 22 23 24 25 26 62
Page 24 of 62