Latest News

ದಟ್ಟಗಳ್ಳಿ ತಿಮ್ಮಕ್ಕ ಉದ್ಯಾನವನದಲ್ಲಿ ಮಿಯಾವಾಕಿ ಕಿರು ಅರಣ್ಯಕ್ಕೆ ಚಾಲನೆ: 15,000ಕ್ಕೂ ಹೆಚ್ಚು ಗಿಡ ನೆಡುವ ಮಹತ್ವಾಕಾಂಕ್ಷಿ ಯೋಜನೆ

ಮೈಸೂರು, ಮಾರ್ಚ್ 27: ನಗರದಲ್ಲಿ ಹಸಿರು ವಲಯವನ್ನು ವಿಸ್ತರಿಸುವ ದಿಟ್ಟ ಹೆಜ್ಜೆಯಾಗಿ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ದಟ್ಟಗಳ್ಳಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮಿಯಾವಾಕಿ ಮಾದರಿಯ ಕಿರು ಅರಣ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಈ ಯೋಜನೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ Toyota Accessories Development ME India Pvt. Ltd. ಸಂಸ್ಥೆಯ ಸಹಯೋಗದಲ್ಲಿ ಜಾರಿಗೊಳ್ಳುತ್ತಿದೆ. ಕಾರ್ಯಕ್ರಮದಲ್ಲಿ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಅವರು...
Latest News

ರಂಗಾಯಣದ ವನರಂಗದಲ್ಲಿ ‘ಪಾರ್ಟಿ’ ನಾಟಕ ಕನ್ನಡಾನುವಾದ ಬಿಡುಗಡೆ: ಸಾಹಿತ್ಯ ರಂಗಭೂಮಿ ಗಣ್ಯರ ಸಮ್ಮೇಳನಕ್ಕೆ ವೇದಿಕೆ

ಮೈಸೂರು : ನಗರದ ಸಾಂಸ್ಕೃತಿಕ ವಾತಾವರಣಕ್ಕೆ ಮತ್ತೊಂದು ಮೆರಗು ಸೇರ್ಪಡೆಯಾಗಲಿದ್ದು, ನಿರಂತರ ಫೌಂಡೇಶನ್ (ರಿ), ಮೈಸೂರು ಹಾಗೂ ಅಭಿರುಚಿ ಪ್ರಕಾಶನ ಸಂಯುಕ್ತವಾಗಿ ಆಯೋಜಿಸಿರುವ ಮರಾಠಿ ಖ್ಯಾತ ನಾಟಕಕಾರ ಮಹೇಶ್ ಎಲಕುಂಚವಾರ್ ಅವರ ‘ಪಾರ್ಟಿ’ ನಾಟಕದ ಕನ್ನಡಾನುವಾದ ಪುಸ್ತಕ ಬಿಡುಗಡೆ ಸಮಾರಂಭವು ಇದೇ ಶನಿವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ರಂಗಾಯಣದ ವನರಂಗ ಸಭಾಂಗಣದಲ್ಲಿ ಮಾರ್ಚ್ 28ರಂದು ಸಂಜೆ 5 ಗಂಟೆಗೆ ನಡೆಯಲಿದ್ದು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ....
Latest News

ಶಿಸ್ತು, ನಿಷ್ಠೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರ ಪ್ರಗತಿ ಸಾಧ್ಯ

– ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು – ಕಿರಿಯ ಪವರ್ ಮ್ಯಾನ್ ಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಮೈಸೂರು, ಮಾ.27, 2026: “ಸರ್ಕಾರಿ ಉದ್ಯೋಗ ಸಿಗುವುದು ಕಷ್ಟಕರವಾದ ಈ ಸಂದರ್ಭದಲ್ಲಿ ನಿಮಗೆ ದೊರೆತಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಿಸ್ತು, ನಿಷ್ಠೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಿದರೆ ಮಾತ್ರ ನಿಮ್ಮ ಬದುಕಿನಲ್ಲಿ ಪ್ರಗತಿ ಸಾಧ್ಯ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ...
Latest News

ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಪ್ರಥಮ ರಾಷ್ಟ್ರೀಯ ಅಣುಕು ನ್ಯಾಯಾಲಯ ಸ್ಪರ್ಧೆಗೆ ಚಾಲನೆ : ನಿವೃತ್ತ ಪ್ರಾಧ್ಯಾಪಕ ಡಾ. ಎಂ.ಕೆ. ರಮೇಶ್ ಉದ್ಘಾಟನೆ        

ಮೈಸೂರು :- ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ದಿನಾಂಕ: 27-03-2026 ರಂದು ಪ್ರಥಮ ರಾಷ್ಟ್ರೀಯ ಅಣುಕು ನ್ಯಾಯಾಲಯ ಸ್ಪರ್ಧೇಯನ್ನು ಆಯೋಚಿಸಿದ್ದು, ಈ ಕಾರ್ಯಕ್ರಮಕ್ಕೆ ಉದ್ಘಾಟನೆಯನ್ನು   ಡಾ. ಎಂ.ಕೆ. ರಮೇಶ್, ನಿವೃತ್ತ ಕಾನೂನು  ಪ್ರಾಧ್ಯಾಪಕರು,  ನ್ಯಾಷನಲ್ ಲಾ ಸ್ಕೂಲ್ ಆಪ್ ಇಂಡಿಯಾ ಯುನಿವರ್ಸಿಟಿ, ಬೆಂಗಳೂರು, ಇವರು ಉದ್ಘಾಟಿಸಿದರು. ಇವರು ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ವ್ಯಸಾಂಗ ಮಾಡಿ ದಿನಗಳನ್ನು ನೆನೆಯುತ್ತ ಈ ಒಂದು ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿ ಜೀವನದ ಕೌಶಲ್ಯವನ್ನು ವೃದ್ದಿಸುವಲ್ಲಿ ಯಶಸ್ವಿಯಾಗಿದೆ. ಈ...
Latest News

ಅಂಬೇಡ್ಕರ್, ಜಗಜೀವನ್ ರಾಮ್ ಜಯಂತಿ ಒಟ್ಟಿಗೆ ಆಚರಣೆ: ಮಾ.30ಕ್ಕೆ ಭಾರಿ ಸಮಾರಂಭಕ್ಕೆ ಶಾಸಕ ಡಿ.ರವಿಶಂಕರ್ ಘೋಷಣೆ

ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್. ನಗರ. ಮಾ. 27:- ಡಾ. ಬಿ ಆರ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆಯನ್ನು ಬೇರೆ ಬೇರೆ ದಿನ ಮಾಡದೆ ಒಂದೇ ದಿನ ಅದ್ದೂರಿಯಾಗಿ ಆಡಂಬರದಿಂದ ಬೃಹತ್ ಕಾರ್ಯಕ್ರಮವನ್ನು ಮಾಡುವ ಮೂಲಕ ಆಚರಣೆ ಮಾಡಬೇಕೆಂದು ಮಾಡಿದ ಒತ್ತಾಯದ ಮೇರೆಗೆ ಶಾಸಕ ಡಿ ರವಿಶಂಕರ್ ಇದೇ ತಿಂಗಳು 30 ರಂದು ಇಬ್ಬರು ಮಹಾನ್ ನಾಯಕರ ಜಯಂತಿ ಕಾರ್ಯಕ್ರಮದ ಸಭೆಯನ್ನು...
Latest News

ಮೈಸೂರಿನಲ್ಲಿ ಟ್ರಾಫಿಕ್ ಸಿಗ್ನಲ್ ಗೊಂದಲ : ಸರ್ವೇ ಇಲ್ಲದೆ ಅಳವಡಿಕೆ ಆರೋಪ : ಹಿರಿಯ ವಕೀಲ ಎ.ಎಂ.ಭಾಸ್ಕರ್ ಬೇಸರ

ಮೈಸೂರು: ನಗರದ ವಿವಿಧೆಡೆ ಕಳೆದ ಡಿಸೆಂಬರ್‌ನಿಂದೀಚೆಗೆ ಎಲ್ಲೆಂದರಲ್ಲಿ ಏಕಾಏಕಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಇದರಿಂದ ಅನುಕೂಲದ ಬದಲು ಸಮಸ್ಯೆಯೇ ಹೆಚ್ಚಾಗಿದೆ. ಹೀಗಾಗಿ ಇವುಗಳನ್ನು ಅಳವಡಿಸುವ ಮುನ್ನ ಯಾವುದಾದರೂ ಸರ್ವೆ ನಡೆದಿದೆಯೇ, ಪಾಲಿಕೆ, ಮುಡಾ, ಭಾರತೀಯ ರಸ್ತೆ ಕಾಂಗ್ರೆಸ್‌ನ ಅನುಮತಿ ಪಡೆಯಲಾಗಿದೆಯೇ ಎಂದು ತಾವು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿದ್ದ ಪ್ರಶ್ನೆಗಳಿಗೆ ಪೊಲೀಸ್ ಆಯುಕ್ತರು ನಕಾರಾತ್ಮಕ ಉತ್ತರ ನೀಡಿದ್ದಾರೆ ಎಂದು ಹಿರಿಯ ವಕೀಲ ಎ.ಎಂ.ಭಾಸ್ಕರ್ ಬೇಸರ ವ್ಯಕ್ತಪಡಿಸಿದರು. ಪತ್ರಕರ್ತರ...
Latest News

ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವುದು ಯುದ್ಧ ಅಂತ್ಯವಾಗಿ ವಿಶ್ವದಲ್ಲಿ ಶಾಂತಿ ನೆಲೆಸಲಿ : ಮಾಜಿ ಶಾಸಕ ಎಂ.ಕೆ.ಸೋಮಶೇಖರ್

ಮೈಸೂರು: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವುದು ಯುದ್ಧ ಅಂತ್ಯವಾಗಿ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂದು ಎಂದು ಒತ್ತಾಯಿಸಿ ಜನಸ್ಪಂದನ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಶಾಂತಿ ಸಂದೇಶ ಕಾರ್ಯಕ್ರಮ ನಡೆಸಲಾಯಿತು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಗರದ ರಾಮಸ್ವಾಮಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂತಿ ಸಂದೇಶ ಸಾರಲಾಯಿತು. ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ಲಕ್ಷಾಂತರ ವರ್ಷಗಳ ಶ್ರಮದಿಂದ ಮನುಷ್ಯ ವಿಕಾಸ ಹೊಂದಿದ್ದಾನೆ. ಆದರೆ, ಯುದ್ಧದ ಮೂಲಕ ಮತ್ತೆ ಮನುಷ್ಯ ಸರ್ವನಾಶವಾಗುತ್ತಿದ್ದಾನೆ....
Latest News

ಹೆಚ್.ಡಿ.ಕೋಟೆ ಸಮೀಪ ಗುಜರಿ ಗೋದಾಮಿಗೆ ಬೆಂಕಿ : ಲಕ್ಷಾಂತರ ರೂ. ನಷ್ಟ, ನಾಲ್ಕು ಗಂಟೆಗಳ ಹೋರಾಟದ ಬಳಿಕ ಅಗ್ನಿ ನಿಯಂತ್ರಣ

ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆ ತಾಲೂಕು: ತಾಲೂಕಿನ ಹ್ಯಾಂಡ್ ಪೋಸ್ಟ್ ಜಕ್ಕಳ್ಳಿ ಸಮೀಪದಲ್ಲಿರುವ ಗುಜರಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಾನುಗಳು ಸುಟ್ಟು ಕರಕಲಾದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜಫ್ರುಲ್ಲಾ ಎಂಬುವರಿಗೆ ಸೇರಿದ ಈ ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಲೋಹದ ಸಾಮಾನುಗಳು, ಪ್ಲಾಸ್ಟಿಕ್ ವಸ್ತುಗಳು, ವೈರ್ಗಳು ಹಾಗೂ ಮರುಬಳಕೆಗೆ ಇಡಲಾಗಿದ್ದ ವಿವಿಧ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ನಾಶವಾಗಿವೆ. ಘಟನೆ ಶುಕ್ರವಾರ ಸಂಜೆ ವೇಳೆ ಸಂಭವಿಸಿದ್ದು, ಪ್ರಾರಂಭದಲ್ಲಿ...
Latest News

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಮೈಸೂರು: ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟಕ್ಕೆ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ದೀಪ ಬೆಳಗುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷದ...
Latest News

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆ ಡಾ. ನಿಂಗರಾಜ್ ಗೌಡರ ಮಾತುಕತೆ

ಮೈಸೂರು: ಭಾರತೀಯ ಜನತಾ ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂದಿನ ರಾಜಕೀಯ ಕಾರ್ಯಯೋಜನೆಗಳ ಕುರಿತು ಮಹತ್ವದ ಚರ್ಚೆಗಳು ಮೈಸೂರಿನಲ್ಲಿ ನಡೆದವು. ಭಾರತ ಸರ್ಕಾರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಬಿಜೆಪಿ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿರುವ ಡಾ. ಈ.ಸಿ. ನಿಂಗರಾಜ್ ಗೌಡರು ಭೇಟಿ ಮಾಡಿ ಪಕ್ಷದ ವಿವಿಧ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಮಾತುಕತೆ ನಡೆಸಿದರು. ಈ ವೇಳೆ ಮೈಸೂರು ವಿಭಾಗದಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಕ್ರಮಗಳು, ಬೂತ್ ಮಟ್ಟದಲ್ಲಿ...
1 2 3 4 5 52
Page 3 of 52