ಸಮಾನ ಅವಕಾಶವಿರುವ ಸಮಸಮಾಜವೇ ಕನಕಗುರುಪೀಠದ ಆಶಯ: ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
ಕನಕಗುರುಪೀಠ ಜಾತ್ಯಾತೀತ ಪೀಠ: ನುಡಿನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸ್ಪಷ್ಟ ಸಂದೇಶ ರಾಯಚೂರು, ಫೆಬ್ರವರಿ 1: ಸಮಾನ ಅವಕಾಶ, ಸಮಾನ ಗೌರವ ಮತ್ತು ಜಾತ್ಯಾತೀತ ಚಿಂತನೆಯನ್ನೊಳಗೊಂಡ ಸಮಸಮಾಜ ನಿರ್ಮಾಣವೇ ಕನಕಗುರುಪೀಠದ ಮೂಲ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕದಲ್ಲಿ ಕನಕಗುರುಪೀಠವು ಜಾತಿ-ಧರ್ಮ ಮೀರಿ ಸಮಾಜವನ್ನು ಒಗ್ಗೂಡಿಸುವ ಜಾತ್ಯಾತೀತ ಪೀಠವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಇಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನ ಪರಮಪೂಜ್ಯ...







