Latest News

ಜೆಡಿಎಸ್ ಪಕ್ಷದಿಂದ ಹೊರಗುಳಿಯಲು ನಿರ್ಧರಿಸಿದ – ಜಿ.ಟಿ.ಡಿ

ಮೈಸೂರು: ಜೆಡಿಎಸ್ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದ ಶಾಸಕ  ಜಿ.ಟಿ ದೇವೇಗೌಡ ಮಂಗಳವಾರ ಜೆಡಿಎಸ್ ಪಕ್ಷದಿಂದ ಹೊರಗುಳಿಯುವ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಪ್ರಕಟಿಸಿದರು. ನನ್ನನ್ನು ಕ್ಷಮಿಸಿ ಅಪ್ಪಾಜಿ (ಎಚ್.ಡಿ. ದೇವೇಗೌಡ) ನಾನು ವಿಧಾಸನಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ. ನನಗೆ ಹಾಗೂ ನನ್ನ ಮಗನಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ.  ನಿಮ್ಮ ಆಶೀರ್ವಾದ ಹೀಗೆ ಇರಲಿ. ನಾನು ಅವಧಿ ಪೂರ್ಣಗೊಳಿಸುವವರೆಗೆ ಜೆಡಿಎಸ್‌ನಲ್ಲಿ ಇರುತ್ತೇನೆ ಎಂದು ಹೇಳುವ ಮೂಲಕ ಜೆಡಿಎಸ್‌ಗೆ ಗುಡ್‌ಬೈ ಹೇಳುವ ಮಾತುಗಳನ್ನು ಆಡಿದರು. ನಾನು ಚಾಮುಂಡೇಶ್ವರಿ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಮಂಡ್ಯ ಜೆಡಿಎಸ್ ನಾಯಕರು ನನ್ನನ್ನು ಭೇಟಿ ಮಾಡಿ ಇತ್ತೀಚೆಗೆ ಮಾತುಕತೆ ನಡೆಸಿದರು.

sri krishnadevaraya hampi
Contact us for classifieds and ads : +91 9742974234



 
error: Content is protected !!