ಹಂಪಾಪುರದಲ್ಲಿ ಆರೋಗ್ಯ ಶಿಬಿರ: ನಿಯಮಿತ ತಪಾಸಣೆಗೆ ತುಳಸಿರಾಮನಾಯಕ ಕರೆ
ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಮಾ. 31:-ವಯಸ್ಕರು, ವಯೋವೃದ್ಧರು ಹಾಗೂ ಯುವಜನತೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಗಾಗಿ ಆರೋಗ್ಯ ಕಾಪಾಡಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಮುಂದಾಗುವಂತೆ ಶಿಕ್ಷಕ ಹಂಪಾಮರ ತುಳಸಿರಾಮನಾಯಕ ಹೇಳಿದರು. ಕೆ.ಆರ್.ನಗರ ತಾಲೂಕಿನ ಹಂಪಾಪುರ ಗ್ರಾಮದ ಶ್ರೀ ಲಕ್ಷ್ಮೀನಾರಾಯಣ ಯುವಕರ ಸಂಘ, ವಿಸ್ಮಯ ಆಸ್ಪತ್ರೆ, ಎಎಸ್ಜಿ ಕಣ್ಣಿನ ಆಸ್ಪತ್ರೆ ಮತ್ತು ಲಯನ್ಸ್ ಜೀವಧಾರ ರಕ್ತನಿಧಿ ಇವರ ಸಹಯೋಗದಲ್ಲಿ ಗ್ರಾಮದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಸಕ್ಕರೆ ಕಾಯಿಲೆ, ರಕ್ತದೊತ್ತಡ ಎಂಬುದು ಸಾಮಾನ್ಯವಾಗಿದ್ದು, ಕಾಲಕಾಲಕ್ಕೆ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆಯುವುದಲ್ಲದೆ ಇವೆರಡು ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು. ಎಲ್ಲಾರು ಆರೋಗ್ಯದ ಕಡೆ ಗಮನ ಹರಿಸಿದ್ದಲ್ಲಿ ಉತ್ತಮ ಆರೋಗ್ಯ ಹೊಂದಬಹುದಾಗಿದೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಂಡಲ್ಲಿ ದೇಹದಲ್ಲಿ ಕಂಡು ಬರುವ ಬದಲಾವಣೆಗಳಿಗೆ ತಕ್ಕಂತೆ ಚಿಕಿತ್ಸೆ...







