ಮೈಸೂರು,ಮಾ.2:-ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಅವರು...
ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೊದಲ ಬಾರಿಗೆ ಆಯೋಜನೆ. ಮೈಸೂರು, ಮಾ. 03— ಮೈಸೂರಿನ ಸುವರ್ಣ ಬೆಳಕು ಫೌಂಡೇಷನ್ (ರಿ) ವತಿಯಿಂದ 2026ನೇ ಸಾಲಿನಲ್ಲಿ ಮೊದಲ ಬಾರಿಗೆ “ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ” ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಯೋಗಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಪೂರ್ವ ನೋಂದಣಿ ಮಾಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಸ್ಪರ್ಧೆಯಲ್ಲಿ “ಚಾಂಪಿಯನ್ ಆಫ್ ಚಾಂಪಿಯನ್” ಪಟ್ಟ ಗೆದ್ದ ವಿಜೇತರಿಗೆ ಆಕರ್ಷಕ ಅಪ್ಪಟ ಬೆಳ್ಳಿ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ವಿವಿಧ ವಿಶೇಷ ವಿಭಾಗಗಳ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ, ಭಾಗವಹಿಸಿದ ಎಲ್ಲಾ...
ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ ಅಭಿಪ್ರಾಯ. ಪ್ರಶ್ನೆ1. ಯುದ್ದವು ಸಾಮಾನ್ಯ ಜನಜೀವನದ ಮೇಲೆ ಯಾವ ಪರಿಣಾಮವನ್ನು ಬೀರಿರಬಹುದು ? ಉತ್ತರ….. ಯುದ್ಧದ ಪರಿಣಾಮ ತುಂಬಾ ಭೀಕರವಾಗಿರುತ್ತದೆ. ಸಾವು, ನೋವು, ಗಾಯ, ಅಂಗವೈಕಲ್ಯ, ವಲಸೆ ಹೆಚ್ಚಾಗುತ್ತದೆ. ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಊಹಿಸಲು ಮನಸ್ಸು ಒಪ್ಪದಷ್ಟು ಹಾಳಾಗಿರುತ್ತದೆ. ಸ್ವಲ್ಪ ದೀರ್ಘಕಾಲ ಯುದ್ಧ ನಡೆದರೆ ಸದಾ ಸಾವಿನ ನೆರಳಿನಲ್ಲಿಯೇ ನರಳುವ ಅಲ್ಲಿನ ಸಾಕಷ್ಟು ಜನರ ಮಾನಸಿಕ ಆರೋಗ್ಯ ಖಿನ್ನತೆಯೆಡೆಗೆ...
ಬೆಂಗಳೂರು ಗ್ರಾಮಾಂತರ, : ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪೋಷಕರು ಹೆಚ್ಚಿನ ವೆಚ್ಚ ಮಾಡಿ ವಸತಿ ಶಾಲೆಗಳಿಗೆ ಕಳುಹಿಸುವ ಸಂದರ್ಭಗಳಲ್ಲಿ, ಮಕ್ಕಳಿಗೆ ರಕ್ಷಣೆ ನೀಡಬೇಕಾದ ಶಾಲೆಯ ಮಾಲೀಕರೇ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ವಸತಿ ಶಾಲೆಯ ಮಾಲೀಕ ಧನಂಜಯ್ ಎಂಬಾತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದು, ಈ ಕೃತ್ಯವನ್ನು ಮುಚ್ಚಿಹಾಕಲು ಸಹಕರಿಸಿದ್ದ ಆರೋಪದಲ್ಲಿ ಆತನ ಪತ್ನಿ ಶೈಲಜಾಳನ್ನೂ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ, ಶಾಲೆಯಲ್ಲಿ ಓದುತ್ತಿದ್ದ ಕೆಲವು ವಿದ್ಯಾರ್ಥಿನಿಯರ ಮೇಲೆ ಧನಂಜಯ್ ಹಲವು ದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಡೆದ ಘಟನೆ ಬಗ್ಗೆ ಪೋಷಕರಿಗೆ ತಿಳಿಸದಂತೆ ಮಕ್ಕಳನ್ನು ಬೆದರಿಸಲಾಗಿದ್ದು, ಪರೀಕ್ಷೆಯ ನೆಪದಲ್ಲಿ ಸುಮಾರು 15 ದಿನಗಳ ಕಾಲ ಪೋಷಕರನ್ನು ಭೇಟಿ ಮಾಡಲು ಅವಕಾಶ ನೀಡದೇ ವಸತಿ...
ಮೇಷ: ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳ ವಿಚಾರವಾಗಿ ವಿವಾದ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಶುಭಸಂಖ್ಯೆ: 3 ವೃಷಭ: ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ವಿರೋಧಿಗಳು ಸಹ ಕಾರ್ಯಗಳಲ್ಲಿ ಬೆಂಬಲ ಸೂಚಿಸುವರು. ಸ್ವಲ್ಪ ಎಚ್ಚರ ವಹಿಸಿರಿ. ಶುಭಸಂಖ್ಯೆ: 8 ಮಿಥುನ: ಹಿರಿಯರ ಸಲಹೆಗಳಿಂದ ಅಭಿವೃದ್ಧಿ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಹಣದ ವ್ಯವಹಾರಗಳಲ್ಲಿ ಉತ್ತಮ ಫಲ. ಶುಭಸಂಖ್ಯೆ: 9 ಕಟಕ: ನಿರ್ಧಾರಗಳನ್ನು ಬದಲಿಸುವ ನಿಮ್ಮ ನಡವಳಿಕೆ ಯಿಂದ ಕುಟುಂಬದಲ್ಲಿ ಅಸಹನೆ. ಸಿಹಿ ಅಂಗಡಿ ಮಾಲೀಕರಿಗೆ ಲಾಭ ಹೆಚ್ಚುತ್ತದೆ. ಶುಭಸಂಖ್ಯೆ:2 ಸಿಂಹ: ಆರೋಗ್ಯದ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಮಹಿಳೆಯರಿಗೆ ಕುಟುಂಬದಲ್ಲಿ ನೆಮ್ಮದಿ. ವೃತ್ತಿಯ ಸಮಸ್ಯೆಗಳಿಗೆ ಪರಿಹಾರ. ಶುಭಸಂಖ್ಯೆ: 2 ಕನ್ಯಾ: ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯ ಶಮನ. ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳಿ. ವಸ್ತ್ರ ವ್ಯಾಪಾರಿಗಳಿಗೆ ಆದಾಯ ಹೆಚ್ಚಳ. ಶುಭಸಂಖ್ಯೆ: 6 ತುಲಾ: ಸಂಪನ್ಮೂಲ ಕ್ರೋಡೀಕರಿಸಲು ಮಾಡಿದ...
ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು ಎಂದು ಖ್ಯಾತ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಹೇಳಿದರು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ...
ಮೈಸೂರು,ಮಾ.1:-ಶ್ರೀ ರೇಣುಕಾಚಾರ್ಯರ ತತ್ವ , ಸಿದ್ಧಾಂತಗಳು ಜಗತ್ತಿನ ಎಲ್ಲರ ಒಳಿತನ್ನು ಬಯಸುತ್ತದೆ. ‘ಮಾನವ ಕುಲಕ್ಕೆ ಒಳಿತಾಗಲಿ’ ಎಂಬ ಉದಾತ್ತ ಚಿಂತನೆ ನಮಗೆ ಎಂದೆಂದಿಗೂ ಆದರ್ಶವಾಗಿರಬೇಕು.ಅವರ ಆದರ್ಶದ ದಾರಿದೀಪದಲ್ಲಿ...
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಮೈಸೂರಿನಾದ್ಯಂತ 1,666 ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ AIDSO ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಮೈಸೂರಿನ...