ಜಾಗತಿಕ ಶೃಂಗಸಭೆಯ ಘಟನೆ ಕಾಂಗ್ರೆಸ್ನ ದುರುದ್ದೇಶ ಮನೋಭಾವಕ್ಕೆ ಸಾಕ್ಷಿ: ಸಂತೋಷ್ ಕುಮಾರ್
ಮೈಸೂರು: ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಜಾಗತಿಕ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ವರ್ತನೆ ರಾಷ್ಟ್ರದ ಗೌರವಕ್ಕೆ ಧಕ್ಕೆಯುಂಟುಮಾಡುವಂತದ್ದಾಗಿದೆ ಎಂದು ಮೈಸೂರು ಮಹಾನಗರ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿರೋಧ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದ್ದರೂ, ದೇಶದ ಘನತೆಯನ್ನು ಹಾನಿಗೊಳಿಸುವ ರೀತಿಯ ನಡೆ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಜಾಗತಿಕ ವೇದಿಕೆಯಲ್ಲಿ ಅಸಭ್ಯ ರೀತಿಯ ಪ್ರತಿಭಟನೆ ನಡೆಸಿರುವುದು ಕಾಂಗ್ರೆಸ್ನ ಹೊಣೆಗಾರಿಕೆಯ ಕೊರತೆಯನ್ನು ತೋರಿಸುತ್ತದೆ. ದೇಶದ ಹಿತಕ್ಕಿಂತ ಪಕ್ಷಪರ ರಾಜಕೀಯವೇ ಮೇಲು ಎನ್ನುವ ಮನೋಭಾವವೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷ ದೇಶದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ವಿವಾದಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯುವಪೀಳಿಗೆಯನ್ನು ತಪ್ಪು ದಾರಿಗೆ ದೂಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಅವರು ಹೇಳಿದರು. ಕರ್ನಾಟಕದಲ್ಲಿ...








