ನ್ಯಾಯ ಒದಗಿಸಬೇಕಾಗಿ ದ್ವಿತೀಯ ಪಿ.ಯು.ಸಿ. ಪುನರಾವರ್ತಿತ ವಿದ್ಯಾರ್ಥಿಗಳ ಬೇಡಿಕೆ
Ujwal Mysuru, June 07th 2021
![](https://askmysuru.com/wp-content/uploads/2021/06/students.jpg)
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಗೊಳಿಸಲಾಗಿದೆ. ಆದರೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಸರ್ಕಾರ ಹೇಳಿದೆ.
ಈ ನಿಟ್ಟಿನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ರದ್ದುಗೊಳಿಸಿ ಉತ್ತೀರ್ಣಗೊಳಿಸಬೇಕಾಗಿ ಸರ್ಕಾರಕ್ಕೆ ಮನವಿಯನ್ನು ಮಾಡುತ್ತಿದ್ದಾರೆ.