ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೊದಲ ಬಾರಿಗೆ ಆಯೋಜನೆ.
ಮೈಸೂರು, ಮಾ. 03— ಮೈಸೂರಿನ ಸುವರ್ಣ ಬೆಳಕು ಫೌಂಡೇಷನ್ (ರಿ) ವತಿಯಿಂದ 2026ನೇ ಸಾಲಿನಲ್ಲಿ ಮೊದಲ ಬಾರಿಗೆ “ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ” ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳ ಯೋಗಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಪೂರ್ವ ನೋಂದಣಿ ಮಾಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಪರ್ಧೆಯಲ್ಲಿ “ಚಾಂಪಿಯನ್ ಆಫ್ ಚಾಂಪಿಯನ್” ಪಟ್ಟ ಗೆದ್ದ ವಿಜೇತರಿಗೆ ಆಕರ್ಷಕ ಅಪ್ಪಟ ಬೆಳ್ಳಿ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ವಿವಿಧ ವಿಶೇಷ ವಿಭಾಗಗಳ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ, ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 81979 59495 ಹಾಗೂ 94489 80010 ಅನ್ನು ಸಂಪರ್ಕಿಸಬಹುದಾಗಿದೆ.
